ರಾಜ್ಯ

ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ : ಕೆ.ವಿ.ಪ್ರಭಾಕರ್

  • ನಾವು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು

ಕೋಲಾರ : ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

50 ವರ್ಷಪೂರೈಸಿದ ಕೋಲಾರ ಪತ್ರಿಕೆಯ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ತಮ್ಮ ಹಾಗೂ ಪತ್ರಿಕೆ ನಡುವಿನ ಭಾವನಾತ್ಮಕ ಸಂಬಂಧವನ್ನು ಹಂಚಿಕೊಂಡರು.

ಒಂದು ಪತ್ರಿಕೆ ಅರ್ಧ ಶತಮಾನ ಪೂರೈಸುವುದು ಎಂದರೆ ಅತ್ಯಂತ ದೊಡ್ಡ ತಪಸ್ಸು. 50 ವರ್ಷಗಳ ಸಮಾಜದ ಪರಿವರ್ತನೆಗೆ ಸಾಕ್ಷಿಯಾಗಿದೆ ಕೋಲಾರ ಪತ್ರಿಕೆ ಎಂದರು.

ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕೋದ್ಯಮ ಸಾಗಿ ಬಂದ ಚಿರಿತ್ರೆಗೆ ಕೋಲಾರ ಪತ್ರಿಕೆ ಸಾಕ್ಷಿಯಾಗಿದೆ. ಈ ಅರ್ಧ ಶತಮಾನದಲ್ಲಿ ಕೋಲಾರ ಪತ್ರಿಕೆ ಮೂಲಕ ವೃತ್ತಿ ಬದುಕನ್ನು ಕಟ್ಟಿಕೊಂಡವರು ಹಲವು ಮಂದಿ ಇದ್ದಾರೆ. ಅವರಲ್ಲಿ ನಾನೂ ಒಬ್ಬ.

ಕೋಲಾರ ಪತ್ರಿಕೆಯಿಂದ ಅಕ್ಷರ ಸಂಸ್ಕೃತಿಗೆ ಎಂಟ್ರಿ ಆದವರು, ಈಗ ವಿಧಾನಸೌಧ ತಲುಪಿದ್ದಾರೆ. ರಾಜ್ಯ ಮಟ್ಟದ ಪತ್ರಿಕೆಗಳಿಗೆ ಹೋಗಿದ್ದಾರೆ. ನಾನು ಇವತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರನಾಗಿದ್ದೇನೆ ಎಂದರೆ ಈ ಬೆಳವಣಿಗೆಯ ಮೊದಲ ಹೆಜ್ಹೆ ಶುರುವಾಗಿದ್ದು ಕೋಲಾರ ಪತ್ರಿಕೆಯಿಂದ. ನಾನು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು ಎಂದು ಕೃತಜ್ಞತೆ ಸಲ್ಲಿಸಿದರು.

ಜಿಲ್ಲಾ ಪತ್ರಿಕೆಗಳ ಏಳು ಬೀಳು, ಸಾಧನೆ, ಸಂಘರ್ಷದ ಬಗ್ಗೆ ಮುಂದಿನ ದಿನಗಳಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳು ಅಧ್ಯಯನ ನಡೆಸಿದರೆ, ಕೋಲಾರ ಪತ್ರಿಕೆ ಅಧ್ಯಯನಕ್ಕೆ , ಪಿ ಹೆಚ್ ಡಿ ಮಾಡುವವರಿಗೆ ಅತ್ಯಂತ ಯೋಗ್ಯವಾದ ವಿಷಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.‌

ಪತ್ರಿಕೆ ಶತಮಾನ ಪೂರೈಸಲಿ, ಪತ್ರಿಕೆಯ ಸಾಧನೆಯನ್ನು ಈ ಸಮಾಜ ಇನ್ನಷ್ಟು ಆತ್ಮೀಯತೆಯಿಂದ ಗುರುತಿಸಲಿ, ತನ್ನದಾಗಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

4 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

4 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago