ರಾಜ್ಯ

ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ : ಕೆ.ವಿ.ಪ್ರಭಾಕರ್

  • ನಾವು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು

ಕೋಲಾರ : ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

50 ವರ್ಷಪೂರೈಸಿದ ಕೋಲಾರ ಪತ್ರಿಕೆಯ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ತಮ್ಮ ಹಾಗೂ ಪತ್ರಿಕೆ ನಡುವಿನ ಭಾವನಾತ್ಮಕ ಸಂಬಂಧವನ್ನು ಹಂಚಿಕೊಂಡರು.

ಒಂದು ಪತ್ರಿಕೆ ಅರ್ಧ ಶತಮಾನ ಪೂರೈಸುವುದು ಎಂದರೆ ಅತ್ಯಂತ ದೊಡ್ಡ ತಪಸ್ಸು. 50 ವರ್ಷಗಳ ಸಮಾಜದ ಪರಿವರ್ತನೆಗೆ ಸಾಕ್ಷಿಯಾಗಿದೆ ಕೋಲಾರ ಪತ್ರಿಕೆ ಎಂದರು.

ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕೋದ್ಯಮ ಸಾಗಿ ಬಂದ ಚಿರಿತ್ರೆಗೆ ಕೋಲಾರ ಪತ್ರಿಕೆ ಸಾಕ್ಷಿಯಾಗಿದೆ. ಈ ಅರ್ಧ ಶತಮಾನದಲ್ಲಿ ಕೋಲಾರ ಪತ್ರಿಕೆ ಮೂಲಕ ವೃತ್ತಿ ಬದುಕನ್ನು ಕಟ್ಟಿಕೊಂಡವರು ಹಲವು ಮಂದಿ ಇದ್ದಾರೆ. ಅವರಲ್ಲಿ ನಾನೂ ಒಬ್ಬ.

ಕೋಲಾರ ಪತ್ರಿಕೆಯಿಂದ ಅಕ್ಷರ ಸಂಸ್ಕೃತಿಗೆ ಎಂಟ್ರಿ ಆದವರು, ಈಗ ವಿಧಾನಸೌಧ ತಲುಪಿದ್ದಾರೆ. ರಾಜ್ಯ ಮಟ್ಟದ ಪತ್ರಿಕೆಗಳಿಗೆ ಹೋಗಿದ್ದಾರೆ. ನಾನು ಇವತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರನಾಗಿದ್ದೇನೆ ಎಂದರೆ ಈ ಬೆಳವಣಿಗೆಯ ಮೊದಲ ಹೆಜ್ಹೆ ಶುರುವಾಗಿದ್ದು ಕೋಲಾರ ಪತ್ರಿಕೆಯಿಂದ. ನಾನು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು ಎಂದು ಕೃತಜ್ಞತೆ ಸಲ್ಲಿಸಿದರು.

ಜಿಲ್ಲಾ ಪತ್ರಿಕೆಗಳ ಏಳು ಬೀಳು, ಸಾಧನೆ, ಸಂಘರ್ಷದ ಬಗ್ಗೆ ಮುಂದಿನ ದಿನಗಳಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳು ಅಧ್ಯಯನ ನಡೆಸಿದರೆ, ಕೋಲಾರ ಪತ್ರಿಕೆ ಅಧ್ಯಯನಕ್ಕೆ , ಪಿ ಹೆಚ್ ಡಿ ಮಾಡುವವರಿಗೆ ಅತ್ಯಂತ ಯೋಗ್ಯವಾದ ವಿಷಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.‌

ಪತ್ರಿಕೆ ಶತಮಾನ ಪೂರೈಸಲಿ, ಪತ್ರಿಕೆಯ ಸಾಧನೆಯನ್ನು ಈ ಸಮಾಜ ಇನ್ನಷ್ಟು ಆತ್ಮೀಯತೆಯಿಂದ ಗುರುತಿಸಲಿ, ತನ್ನದಾಗಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago