ಬೆಂಗಳೂರು : KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಹಿನ್ನೆಲೆ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಭ್ರಮಾಚರಣೆಯ ಅಂಗವಾಗಿ ಒಂದು ಕೋಟಿ ಹಾಲು ಶೇಖರಣೆ ಫಲಕಕ್ಕೆ ಬೆಲ್ ಹೊಡೆದು ಗೋಮಾತೆಗೆ ಸಿಎಂ ಸಿದ್ದರಾಮಯ್ಯ ವಿಶೇಷವಾದ ಪೂಜೆ ಸಲ್ಲಿಸಿದರು.
ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಇದೇ ಜುಲೈನಲ್ಲಿ 90 ಲಕ್ಷ ಲೀಟರ್ ಪ್ರತಿ ದಿನ ಇತ್ತು. ಈ ವರ್ಷ ಒಂದು ದಿನಕ್ಕೆ 1 ಕೋಟಿ ಲೀಟರ್ ಉತ್ಪಾದನೆ ತಲುಪಿದ್ದೇವೆ. ಇದೊಂದು KMF ಇತಿಹಾಸದಲ್ಲಿ ಮೈಲಿಗಲ್ಲು. ನಾನು ಪಶುಸಂಗೋಪನೆ ಮಂತ್ರಿ ಸ್ವಲ್ಪ ದಿನ ಆಗಿದ್ದೆ. ಆಗ ಮಿಲ್ಕ್ ಯೂನಿಯನ್ಗೆ ಡೈರಿಗಳನ್ನ ಸೇರಿಸಿದ್ದೆವು. ನಮ್ಮಲ್ಲಿ ಈಗ 15 ಯುನಿಯನ್ಗಳು ಇವೆ. 15 ಡೈರಿಗಳು ಇವೆ. ಇವು ಹಾಲು ಮಾರಾಟ ಮಾಡುತ್ತವೆ ಎಂದು ತಿಳಿಸಿದರು.
ಈ ಸಂದರ್ಭ ಸಚಿವರಾದ ಚೆಲುವರಾಯಸ್ವಾಮಿ, ರಾಜಣ್ಣ, ಭೈರತಿ ಸುರೇಶ್, ಜಮೀರ್ ಅಹಮದ್ , ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಮಾಜಿ ಸಂಸದ ಡಿಕೆ ಸುರೇಶ್ ಸೇರಿ ಇತರ ಶಾಸಕರು ಭಾಗಿಯಾಗಿದ್ದರು
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…