ಬೆಂಗಳೂರು : KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಹಿನ್ನೆಲೆ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಭ್ರಮಾಚರಣೆಯ ಅಂಗವಾಗಿ ಒಂದು ಕೋಟಿ ಹಾಲು ಶೇಖರಣೆ ಫಲಕಕ್ಕೆ ಬೆಲ್ ಹೊಡೆದು ಗೋಮಾತೆಗೆ ಸಿಎಂ ಸಿದ್ದರಾಮಯ್ಯ ವಿಶೇಷವಾದ ಪೂಜೆ ಸಲ್ಲಿಸಿದರು.
ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಇದೇ ಜುಲೈನಲ್ಲಿ 90 ಲಕ್ಷ ಲೀಟರ್ ಪ್ರತಿ ದಿನ ಇತ್ತು. ಈ ವರ್ಷ ಒಂದು ದಿನಕ್ಕೆ 1 ಕೋಟಿ ಲೀಟರ್ ಉತ್ಪಾದನೆ ತಲುಪಿದ್ದೇವೆ. ಇದೊಂದು KMF ಇತಿಹಾಸದಲ್ಲಿ ಮೈಲಿಗಲ್ಲು. ನಾನು ಪಶುಸಂಗೋಪನೆ ಮಂತ್ರಿ ಸ್ವಲ್ಪ ದಿನ ಆಗಿದ್ದೆ. ಆಗ ಮಿಲ್ಕ್ ಯೂನಿಯನ್ಗೆ ಡೈರಿಗಳನ್ನ ಸೇರಿಸಿದ್ದೆವು. ನಮ್ಮಲ್ಲಿ ಈಗ 15 ಯುನಿಯನ್ಗಳು ಇವೆ. 15 ಡೈರಿಗಳು ಇವೆ. ಇವು ಹಾಲು ಮಾರಾಟ ಮಾಡುತ್ತವೆ ಎಂದು ತಿಳಿಸಿದರು.
ಈ ಸಂದರ್ಭ ಸಚಿವರಾದ ಚೆಲುವರಾಯಸ್ವಾಮಿ, ರಾಜಣ್ಣ, ಭೈರತಿ ಸುರೇಶ್, ಜಮೀರ್ ಅಹಮದ್ , ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಮಾಜಿ ಸಂಸದ ಡಿಕೆ ಸುರೇಶ್ ಸೇರಿ ಇತರ ಶಾಸಕರು ಭಾಗಿಯಾಗಿದ್ದರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…