ಬೆಂಗಳೂರು : KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಹಿನ್ನೆಲೆ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಭ್ರಮಾಚರಣೆಯ ಅಂಗವಾಗಿ ಒಂದು ಕೋಟಿ ಹಾಲು ಶೇಖರಣೆ ಫಲಕಕ್ಕೆ ಬೆಲ್ ಹೊಡೆದು ಗೋಮಾತೆಗೆ ಸಿಎಂ ಸಿದ್ದರಾಮಯ್ಯ ವಿಶೇಷವಾದ ಪೂಜೆ ಸಲ್ಲಿಸಿದರು.
ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಇದೇ ಜುಲೈನಲ್ಲಿ 90 ಲಕ್ಷ ಲೀಟರ್ ಪ್ರತಿ ದಿನ ಇತ್ತು. ಈ ವರ್ಷ ಒಂದು ದಿನಕ್ಕೆ 1 ಕೋಟಿ ಲೀಟರ್ ಉತ್ಪಾದನೆ ತಲುಪಿದ್ದೇವೆ. ಇದೊಂದು KMF ಇತಿಹಾಸದಲ್ಲಿ ಮೈಲಿಗಲ್ಲು. ನಾನು ಪಶುಸಂಗೋಪನೆ ಮಂತ್ರಿ ಸ್ವಲ್ಪ ದಿನ ಆಗಿದ್ದೆ. ಆಗ ಮಿಲ್ಕ್ ಯೂನಿಯನ್ಗೆ ಡೈರಿಗಳನ್ನ ಸೇರಿಸಿದ್ದೆವು. ನಮ್ಮಲ್ಲಿ ಈಗ 15 ಯುನಿಯನ್ಗಳು ಇವೆ. 15 ಡೈರಿಗಳು ಇವೆ. ಇವು ಹಾಲು ಮಾರಾಟ ಮಾಡುತ್ತವೆ ಎಂದು ತಿಳಿಸಿದರು.
ಈ ಸಂದರ್ಭ ಸಚಿವರಾದ ಚೆಲುವರಾಯಸ್ವಾಮಿ, ರಾಜಣ್ಣ, ಭೈರತಿ ಸುರೇಶ್, ಜಮೀರ್ ಅಹಮದ್ , ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಮಾಜಿ ಸಂಸದ ಡಿಕೆ ಸುರೇಶ್ ಸೇರಿ ಇತರ ಶಾಸಕರು ಭಾಗಿಯಾಗಿದ್ದರು
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…