ರಾಜ್ಯ

ರೈತ ಉತ್ಪಾದಕ ಸಂಸ್ಥೆ (FPO)ಗಳಿಗೆ 3 ಕೋಟಿ ರೂ ಸಬ್ಸಿಡಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಆಸಕ್ತಿ ಇದ್ದರಷ್ಟೇ ಅಂತಹ ಯೋಜನೆಗಳು ಯಶ್ವಸಿಯಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು..

ಬೆಂಗಳೂರಿನ ಟೌನ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ರೈತ ಉತ್ಪಾದಕ ಸಂಸ್ಥೆಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯಿಂದ ಲಾಭ ಪಡೆಯುವ ಉದ್ದೇಶದಿಂದ ಸರ್ಕಾರ ಅನೇಕ ರೈತಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಲಾಭ ಪಡೆಯುವ ಮೂಲಕ ರೈತ ಸಮುದಾಯ ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದರು..

ಇದನ್ನು ಓದಿ: ಮಂಡ್ಯ | ಜಮೀನುಗಳಿಗೆ ನುಗ್ಗಿದ ನೀರು: ಬೆಳೆ ನಷ್ಟದ ಆತಂಕದಲ್ಲಿ ರೈತರು

PMFME ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತ ಉತ್ಪಾದಕ ಸಂಸ್ಥೆಗಳು (FPO) ಹಾಗು ಸದಸ್ಯರು, ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಸಂಸ್ಕರಣೆ ಮುಖಾಂತರ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ರೈತರಿಗೆ ಇದೇ ವೇಳೆ ಸಚಿವರು ಕರೆ ನೀಡಿದರು.

ಈ ಯೋಜನೆಯಡಿ ಸಾಮಾನ್ಯ ಮೂಲ ಸೌಕರ್ಯ ಸ್ಥಾಪನೆಗೆ ಶೇ.35 ಸಾಲ ಸಹಾಯಧನ ಅಥವಾ ಗರಿಷ್ಠ 3 ಕೋಟಿ ರೂ. ಸಬ್ಸಿಡಿ ಸಿಗಲಿದೆ. ಎಲ್ಲಾ FPO ಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಪೆಕ್ ಅಧ್ಯಕ್ಷ ಹರೀಶ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಜಂಟಿ ನಿರ್ದೇಶಕ ಡಾ.ಶಿವಕುಮಾರ್, ಅಶೋಕ್ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

32 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

38 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

42 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

46 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago