ರಾಜ್ಯ

ರೈತ ಉತ್ಪಾದಕ ಸಂಸ್ಥೆ (FPO)ಗಳಿಗೆ 3 ಕೋಟಿ ರೂ ಸಬ್ಸಿಡಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಆಸಕ್ತಿ ಇದ್ದರಷ್ಟೇ ಅಂತಹ ಯೋಜನೆಗಳು ಯಶ್ವಸಿಯಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು..

ಬೆಂಗಳೂರಿನ ಟೌನ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ರೈತ ಉತ್ಪಾದಕ ಸಂಸ್ಥೆಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯಿಂದ ಲಾಭ ಪಡೆಯುವ ಉದ್ದೇಶದಿಂದ ಸರ್ಕಾರ ಅನೇಕ ರೈತಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಲಾಭ ಪಡೆಯುವ ಮೂಲಕ ರೈತ ಸಮುದಾಯ ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದರು..

ಇದನ್ನು ಓದಿ: ಮಂಡ್ಯ | ಜಮೀನುಗಳಿಗೆ ನುಗ್ಗಿದ ನೀರು: ಬೆಳೆ ನಷ್ಟದ ಆತಂಕದಲ್ಲಿ ರೈತರು

PMFME ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತ ಉತ್ಪಾದಕ ಸಂಸ್ಥೆಗಳು (FPO) ಹಾಗು ಸದಸ್ಯರು, ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಸಂಸ್ಕರಣೆ ಮುಖಾಂತರ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ರೈತರಿಗೆ ಇದೇ ವೇಳೆ ಸಚಿವರು ಕರೆ ನೀಡಿದರು.

ಈ ಯೋಜನೆಯಡಿ ಸಾಮಾನ್ಯ ಮೂಲ ಸೌಕರ್ಯ ಸ್ಥಾಪನೆಗೆ ಶೇ.35 ಸಾಲ ಸಹಾಯಧನ ಅಥವಾ ಗರಿಷ್ಠ 3 ಕೋಟಿ ರೂ. ಸಬ್ಸಿಡಿ ಸಿಗಲಿದೆ. ಎಲ್ಲಾ FPO ಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಪೆಕ್ ಅಧ್ಯಕ್ಷ ಹರೀಶ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಜಂಟಿ ನಿರ್ದೇಶಕ ಡಾ.ಶಿವಕುಮಾರ್, ಅಶೋಕ್ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

7 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

8 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

9 hours ago