Urea supply cut awareness about organic farming will be created
ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1,52,760 ಮೆಟ್ರಿಕ್ ಟನ್ ಯೂರಿಯ ರಸಗೊಬ್ಬರ ಸರಬರಾಜು ಆಗುವುದು ಬಾಕಿ ಇದೆ ಎಂದು ಕೃಷಿ ಸಚಿವ ಎಂ.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 11,17,000 ಮೆಟ್ರಿಕ್ ಟನ್ ರಸಗೊಬ್ಬರ ಹಂಚಿಕೆಯಾಗಿದೆ ಎಂದಿದ್ದಾರೆ.
ಏಪ್ರಿಲ್ನಿಂದ ಜು.26 ರವರೆಗೆ ಯೂರಿಯ ರಸಗೊಬ್ಬರದ ಬೇಡಿಕೆ, 6,80,655 ಮೆಟ್ರಿಕ್ ಟನ್ನಷ್ಟಿದೆ. ಕೇಂದ್ರ ಸರ್ಕಾರ 5,27, 895 ಮೆಟ್ರಿಕ್ ಟನ್ ಯೂರಿಯಾವನ್ನು ಸರಬರಾಜು ಮಾಡಿದೆ. ಹಳೆಯ ದಾಸ್ತಾನು 3,46,499 ಮೆಟ್ರಿಕ್ ಟನ್ ಇತ್ತು ಅವರು ಹೇಳಿದ್ದಾರೆ.
ಒಟ್ಟು 8.74,394 ಮೆಟ್ರಿಕ್ ಟನ್ ಯೂರಿಯ ದಾಸ್ತಾನಿನಲ್ಲಿ 7,30,659 ಮೆಟ್ರಿಕ್ ಟನ್ ವಿತರಣೆ ಮತ್ತು ಮಾರಾಟ ಮಾಡಲಾಗಿದೆ. ಇನ್ನು 1,53,735 ಮೆಟ್ರಿಕ್ ಟನ್ ದಾಸ್ತಾನಿದೆ ಎಂದು ಮಾಹಿತಿ ನೀಡಿದ್ದಾರೆ.
ಶನಿವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯೂರಿಯ ರಸಗೊಬ್ಬರದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…