Urea supply cut awareness about organic farming will be created
ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1,52,760 ಮೆಟ್ರಿಕ್ ಟನ್ ಯೂರಿಯ ರಸಗೊಬ್ಬರ ಸರಬರಾಜು ಆಗುವುದು ಬಾಕಿ ಇದೆ ಎಂದು ಕೃಷಿ ಸಚಿವ ಎಂ.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 11,17,000 ಮೆಟ್ರಿಕ್ ಟನ್ ರಸಗೊಬ್ಬರ ಹಂಚಿಕೆಯಾಗಿದೆ ಎಂದಿದ್ದಾರೆ.
ಏಪ್ರಿಲ್ನಿಂದ ಜು.26 ರವರೆಗೆ ಯೂರಿಯ ರಸಗೊಬ್ಬರದ ಬೇಡಿಕೆ, 6,80,655 ಮೆಟ್ರಿಕ್ ಟನ್ನಷ್ಟಿದೆ. ಕೇಂದ್ರ ಸರ್ಕಾರ 5,27, 895 ಮೆಟ್ರಿಕ್ ಟನ್ ಯೂರಿಯಾವನ್ನು ಸರಬರಾಜು ಮಾಡಿದೆ. ಹಳೆಯ ದಾಸ್ತಾನು 3,46,499 ಮೆಟ್ರಿಕ್ ಟನ್ ಇತ್ತು ಅವರು ಹೇಳಿದ್ದಾರೆ.
ಒಟ್ಟು 8.74,394 ಮೆಟ್ರಿಕ್ ಟನ್ ಯೂರಿಯ ದಾಸ್ತಾನಿನಲ್ಲಿ 7,30,659 ಮೆಟ್ರಿಕ್ ಟನ್ ವಿತರಣೆ ಮತ್ತು ಮಾರಾಟ ಮಾಡಲಾಗಿದೆ. ಇನ್ನು 1,53,735 ಮೆಟ್ರಿಕ್ ಟನ್ ದಾಸ್ತಾನಿದೆ ಎಂದು ಮಾಹಿತಿ ನೀಡಿದ್ದಾರೆ.
ಶನಿವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯೂರಿಯ ರಸಗೊಬ್ಬರದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…