ರಾಜ್ಯ

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಸಿಎಂ ಸಿದ್ದರಾಮಯ್ಯ ಅವರ ಭಂಡತನಕ್ಕೆ ಅವರೇ ಸಾಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್‌ ಮಾಡಿರುವ ಅವರು, ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ಹೃದಯ ವೈಶಾಲ್ಯವಿರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಗುತ್ತಿತ್ತು. ಆದರೆ ಕನ್ನಡಿಗರು ನತದೃಷ್ಟರು. ಕೇರಳದವರಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ಕುಹಕವಾಡಿದ್ದಾರೆ.

2025-26ನೇ ಹಣಕಾಸು ವರ್ಷದಲ್ಲಿ ಬಜೆಟ್ ಹೊರತಾಗಿ ವೆಚ್ಚ ಮಾಡಿರುವ ಮತ್ತು ಮಾಡಲಾಗುವ 14,767 ಕೋಟಿ ರೂ. ಮೊತ್ತದ 3ನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜಿನಲ್ಲಿ ವಯನಾಡಿನ ಮುಪ್ಪಾಡಿಯಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಮತ್ತೊಮ್ಮೆ 10 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

3 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

19 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

19 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

1 day ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

1 day ago