ರಾಜ್ಯ

ಉಚಿತ ಬಸ್‌ ಎಫೆಕ್ಟ್:‌ ಪ್ರವಾಸೋದ್ಯಮದಲ್ಲಿ ಕರ್ನಾಟಕ ಭರ್ಜರಿ ಜಂಪ್!

ಬೆಂಗಳೂರು: ಕರ್ನಾಟಕದಲ್ಲಿರುವ ವಿವಿಧ ಪ್ರವಾಸಿ ತಾಣಗಳಿಗೆ ಒಂದು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆ 10 ಕೋಟಿಯಷ್ಟು ಹೆಚ್ಚಾಗಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಪ್ರಯಾಣ ಯೋಜನೆ ವ್ಯವಸ್ಥೆಯೇ ಇದಕ್ಕೆ ಮೂಲ ಕಾರಣ ಎನ್ನಲಾಗಿದೆ.

ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತಿಹೆಚ್ಚು ಪ್ರವಾಸಿಗರ ಸಂಖ್ಯೆ ಇದಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಂಕಿಅಂಶದ ಪ್ರಕಾರ 2022ರಲ್ಲಿ ಪ್ರವಾಸಿಗರ ಸಂಖ್ಯೆ 18.27 ಕೋಟಿಯಷ್ಟಿತ್ತು. ಕೋವಿಡ್ ನಂತರ ದೊಡ್ಡ ಮಟ್ಟದಲ್ಲಿ ಕುಸಿದಿದ್ದ ಪ್ರಯಾಣಿಕರ ಸಂಖ್ಯೆ ಕರ್ನಾಟಕ ಸರ್ಕಾರವು ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ ಪರಿಣಾಮ ಈ ಬಾರಿ ಏರಿಕೆ ಕಂಡಿದೆ ಎನ್ನಬಹುದು. ರಾಜ್ಯಾದ್ಯಂತ 2023ರಲ್ಲಿ 28.45 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು, ಮಂಡ್ಯ, ಬೆಂಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಹಾಗೂ ಕೋಲಾರ ತಾಣಗಳಿಗೆ ಪ್ರವಾಸಿಗರ ಸಂಖ್ಯೆಯು ಹೆಚ್ಚಳವಾಗಿದ್ದು, ಸರ್ಕಾರದ ಉಪಕ್ರಮಗಳು ಮತ್ತು ಪ್ರವಾಸೋದ್ಯಮಕ್ಕೆ ನೀಡಿದ ಉತ್ತೇಜನವೇ ಇದಕ್ಕೆ ಮೂಲ ಕಾರಣವಾಗಿದ್ದು, ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಸಹಾಯ ಮಾಡಿ ರಾಜ್ಯದ ಪ್ರವಾಸಿ ತಾಣಗಳನ್ನು ಜನಪ್ರಿಯಗೊಳಿಸಲು ಪ್ರವಾಸೋದ್ಯಮ ಇಲಾಖೆಯ ಮೂಲಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆಯ ನಿರ್ದೇಶಕ ಡಾ. ವಿ. ರಾಮ್ ಪ್ರಸಾದ್ ಮನೋಹರ್ ಅವರು ಹೇಳಿದ್ದಾರೆ.

andolana

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago