ಬೆಂಗಳೂರು: ಕರ್ನಾಟಕದಲ್ಲಿರುವ ವಿವಿಧ ಪ್ರವಾಸಿ ತಾಣಗಳಿಗೆ ಒಂದು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆ 10 ಕೋಟಿಯಷ್ಟು ಹೆಚ್ಚಾಗಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಪ್ರಯಾಣ ಯೋಜನೆ ವ್ಯವಸ್ಥೆಯೇ ಇದಕ್ಕೆ ಮೂಲ ಕಾರಣ ಎನ್ನಲಾಗಿದೆ.
ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತಿಹೆಚ್ಚು ಪ್ರವಾಸಿಗರ ಸಂಖ್ಯೆ ಇದಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಂಕಿಅಂಶದ ಪ್ರಕಾರ 2022ರಲ್ಲಿ ಪ್ರವಾಸಿಗರ ಸಂಖ್ಯೆ 18.27 ಕೋಟಿಯಷ್ಟಿತ್ತು. ಕೋವಿಡ್ ನಂತರ ದೊಡ್ಡ ಮಟ್ಟದಲ್ಲಿ ಕುಸಿದಿದ್ದ ಪ್ರಯಾಣಿಕರ ಸಂಖ್ಯೆ ಕರ್ನಾಟಕ ಸರ್ಕಾರವು ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ ಪರಿಣಾಮ ಈ ಬಾರಿ ಏರಿಕೆ ಕಂಡಿದೆ ಎನ್ನಬಹುದು. ರಾಜ್ಯಾದ್ಯಂತ 2023ರಲ್ಲಿ 28.45 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು, ಮಂಡ್ಯ, ಬೆಂಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಹಾಗೂ ಕೋಲಾರ ತಾಣಗಳಿಗೆ ಪ್ರವಾಸಿಗರ ಸಂಖ್ಯೆಯು ಹೆಚ್ಚಳವಾಗಿದ್ದು, ಸರ್ಕಾರದ ಉಪಕ್ರಮಗಳು ಮತ್ತು ಪ್ರವಾಸೋದ್ಯಮಕ್ಕೆ ನೀಡಿದ ಉತ್ತೇಜನವೇ ಇದಕ್ಕೆ ಮೂಲ ಕಾರಣವಾಗಿದ್ದು, ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಸಹಾಯ ಮಾಡಿ ರಾಜ್ಯದ ಪ್ರವಾಸಿ ತಾಣಗಳನ್ನು ಜನಪ್ರಿಯಗೊಳಿಸಲು ಪ್ರವಾಸೋದ್ಯಮ ಇಲಾಖೆಯ ಮೂಲಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆಯ ನಿರ್ದೇಶಕ ಡಾ. ವಿ. ರಾಮ್ ಪ್ರಸಾದ್ ಮನೋಹರ್ ಅವರು ಹೇಳಿದ್ದಾರೆ.
ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…