ಬೆಂಗಳೂರು: ಕರ್ನಾಟಕದಲ್ಲಿರುವ ವಿವಿಧ ಪ್ರವಾಸಿ ತಾಣಗಳಿಗೆ ಒಂದು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆ 10 ಕೋಟಿಯಷ್ಟು ಹೆಚ್ಚಾಗಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಪ್ರಯಾಣ ಯೋಜನೆ ವ್ಯವಸ್ಥೆಯೇ ಇದಕ್ಕೆ ಮೂಲ ಕಾರಣ ಎನ್ನಲಾಗಿದೆ.
ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತಿಹೆಚ್ಚು ಪ್ರವಾಸಿಗರ ಸಂಖ್ಯೆ ಇದಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಂಕಿಅಂಶದ ಪ್ರಕಾರ 2022ರಲ್ಲಿ ಪ್ರವಾಸಿಗರ ಸಂಖ್ಯೆ 18.27 ಕೋಟಿಯಷ್ಟಿತ್ತು. ಕೋವಿಡ್ ನಂತರ ದೊಡ್ಡ ಮಟ್ಟದಲ್ಲಿ ಕುಸಿದಿದ್ದ ಪ್ರಯಾಣಿಕರ ಸಂಖ್ಯೆ ಕರ್ನಾಟಕ ಸರ್ಕಾರವು ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ ಪರಿಣಾಮ ಈ ಬಾರಿ ಏರಿಕೆ ಕಂಡಿದೆ ಎನ್ನಬಹುದು. ರಾಜ್ಯಾದ್ಯಂತ 2023ರಲ್ಲಿ 28.45 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು, ಮಂಡ್ಯ, ಬೆಂಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಹಾಗೂ ಕೋಲಾರ ತಾಣಗಳಿಗೆ ಪ್ರವಾಸಿಗರ ಸಂಖ್ಯೆಯು ಹೆಚ್ಚಳವಾಗಿದ್ದು, ಸರ್ಕಾರದ ಉಪಕ್ರಮಗಳು ಮತ್ತು ಪ್ರವಾಸೋದ್ಯಮಕ್ಕೆ ನೀಡಿದ ಉತ್ತೇಜನವೇ ಇದಕ್ಕೆ ಮೂಲ ಕಾರಣವಾಗಿದ್ದು, ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಸಹಾಯ ಮಾಡಿ ರಾಜ್ಯದ ಪ್ರವಾಸಿ ತಾಣಗಳನ್ನು ಜನಪ್ರಿಯಗೊಳಿಸಲು ಪ್ರವಾಸೋದ್ಯಮ ಇಲಾಖೆಯ ಮೂಲಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆಯ ನಿರ್ದೇಶಕ ಡಾ. ವಿ. ರಾಮ್ ಪ್ರಸಾದ್ ಮನೋಹರ್ ಅವರು ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…