ಬೆಂಗಳೂರು: ಲಾಲ್ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರುಗಳನ್ನು ಆಲಿಸಿದ್ದೇನೆ. ಶೀಘ್ರದಲ್ಲೇ ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಮ್ ಮಾಡಲಾಗುವುದು ಎಂದು ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಅವಕಾಶ ಇರುವ ಕಡೆ ಲಾಲ್ಬಾಗ್ ಮಾದರಿಯಲ್ಲಿ ಟ್ರೀಪಾರ್ಕ್ ಮಾಡಲು ಅರಣ್ಯ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ. ಅದಕ್ಕೆ ಆರ್ಥಿಕ ಬೆಂಬಲವನ್ನು ನೀಡಲಾಗುವುದು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವೈದ್ಯರು ಹಾಗೂ ಆಂಬುಲೆನ್ಸ್ ಸೇವೆ ನಿಯೋಜನೆಗೆ ತೀರ್ಮಾನಿಸಿದ್ದೇವೆ ಎಂದರು.
ಇನ್ನು ಬೆಂಗಳೂರಿನ ಕಸದ ಸಮಸ್ಯೆ ವಿಚಾರವಾಗಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ಬ್ಲಾಕ್ ಸ್ಪಾಟ್ ಇದೆಯೋ ಅಲ್ಲಿ ಕ್ಯಾಮರಾ ಅಳವಡಿಸಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…