ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ 100 ಹಾಸಿಗೆವುಳ್ಳ ಐ.ಸಿ.ಯು ಘಟಕ ಮಂಜೂರು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು ಕೋರಿದರು.
ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಚುಕ್ಕೆ ಗುರಿತಿನ ಪ್ರಶ್ನೆ ಉತ್ತರ ಪಡೆದು ಮಾತನಾಡಿದ ಅವರು, ಕೆ.ಆರ್.ಆಸ್ಪತ್ರೆಯಲ್ಲಿ 37 ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ಡಯಾಲಿಸಿಸ್ ಸೇವೆಗೆ ತಂತ್ರಜ್ಞರ ಕೊರತೆ ಇದೆ. ಖಾಲಿ ಇರುವ 117 ಹುದ್ದೆಗಳನ್ನು ಭರ್ತಿ ಮಾಡಿ, ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಕೆ.ಆರ್.ಆಸ್ಪತ್ರೆಯ ಐ.ಸಿ.ಯು ಘಟಕದಲ್ಲಿ 50 ಹಾಸಿಗೆ ಮಾತ್ರ ಲಭ್ಯವಿದ್ದು, ತುರ್ತು ಚಿಕಿತ್ಸೆಗಾಗಿ ರೋಗಿಗಳು ಪರದಾಡುವಂತಾಗಿದೆ. ಚಲುವಾಂಬ ತಾಯಿ ಮಕ್ಕಳ ಆಸ್ಪತ್ರೆಯಲ್ಲಿಯೂ ಹಾಸಿಗೆಗಳ ಕೊರತೆ ಇದ್ದು, ಒಂದು ಹಾಸಿಗೆಯಲ್ಲಿ ಎರಡು ಮಕ್ಕಳನ್ನು ಮಲಗಿಸುತ್ತಿದ್ದಾರೆ. ಶಿಶು ಮರಣ ಪ್ರಮಾಣ ಶೇ.11.3 ರಷ್ಟಿದ್ದು, ಕೂಡಲೇ ಎರಡು ಆಸ್ಪತ್ರೆಯಲ್ಲೂ 100 ಹಾಸಿಗೆಯ ಐ.ಸಿ.ಯು ಘಟಕ ಸ್ಥಾಪಿಸಬೇಕು ಎಂದರು.
ಟ್ರಾಮಾ ಕೇರ್ ಸೆಂಟರ್ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಒ.ಪಿ.ಡಿ ಸೇವೆ ಮಾತ್ರ ಚಾಲ್ತಿಯಲ್ಲಿದೆ. ಇವು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಕ್ರಮವಹಿಸಬೇಕು. ಕೆ.ಆರ್.ಆಸ್ಪತ್ರೆಯಿಂದ 5 ಕಿ.ಮೀ. ದೂರದಲ್ಲಿರುವ ಈ ಆಸ್ಪತ್ರೆಗೆ ರೋಗಿಗಳನ್ನು ಸಾಗಿಸಲು ಕಷ್ಟವಾಗುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಯಂತೆ ಒಂದೇ ಆವರಣದಲ್ಲಿ ಕಟ್ಟಡ ನಿರ್ಮಿಸಿಬೇಕು. ಇದಕ್ಕಾಗಿ ಎಂಎಂಸಿ&ಆರ್ಐ ನಲ್ಲಿ ಸಾಕಷ್ಟು ಜಾಗ ಲಭ್ಯವಿದೆ. ಈ ಕ್ರಮದಿಂದಾಗಿ ತುರ್ತು ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಹೇಳಿದರು.
ಆಸ್ಪತ್ರೆಗೆ ಮತ್ತಷ್ಟು ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕು. ಇಲ್ಲಿ ಪರಿಣಿತ ವೈದ್ಯರಿದ್ದಾರೆ. ಆದರೆ ನರ್ಸ್ಗಳ ಕೊರತೆಯಿದ್ದು, ಹೊರಗುತ್ತಿಗೆಯಿಂದ ಪಡೆಯುವ ಸೇವೆಯಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ತಿಳಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್.ಪಾಟೀಲ್ ಅವರು, ಶೀಘ್ರದಲ್ಲೇ ಇನ್ಸಿಟ್ಯೂಟ್ ಆಫ್ ನೆಫ್ರಾಲಜಿ 100 ಹಾಸಿಗೆವುಳ್ಳ ಶಾಖೆ ನಿರ್ಮಾಣ ಮಾಡಲಾಗುತ್ತಿದೆ. ಒಳ ಮೀಸಲಾತಿ ನಿವಾರಣೆ ಕುರಿತು ಸಚಿವ ಸಂಪುಟದಲ್ಲಿ ಚರ್ಚಸಿ ತೀರ್ಮಾನ ಕೈಗೊಳ್ಳಲಾಗಿದೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲಾಗುವುದು. ಅಲ್ಲದೆ, 100 ಹಾಸಿಗೆವುಳ್ಳ ಐ.ಸಿ.ಯು ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…