ರಾಜ್ಯ

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ 100 ಹಾಸಿಗೆವುಳ್ಳ ಐ.ಸಿ.ಯು ಘಟಕ ಮಂಜೂರು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು ಕೋರಿದರು.

ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಚುಕ್ಕೆ ಗುರಿತಿನ ಪ್ರಶ್ನೆ ಉತ್ತರ ಪಡೆದು ಮಾತನಾಡಿದ ಅವರು, ಕೆ.ಆರ್.ಆಸ್ಪತ್ರೆಯಲ್ಲಿ 37 ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ಡಯಾಲಿಸಿಸ್ ಸೇವೆಗೆ ತಂತ್ರಜ್ಞರ ಕೊರತೆ ಇದೆ. ಖಾಲಿ ಇರುವ 117 ಹುದ್ದೆಗಳನ್ನು ಭರ್ತಿ ಮಾಡಿ, ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಕೆ.ಆರ್.ಆಸ್ಪತ್ರೆಯ ಐ.ಸಿ.ಯು ಘಟಕದಲ್ಲಿ 50 ಹಾಸಿಗೆ ಮಾತ್ರ ಲಭ್ಯವಿದ್ದು, ತುರ್ತು ಚಿಕಿತ್ಸೆಗಾಗಿ ರೋಗಿಗಳು ಪರದಾಡುವಂತಾಗಿದೆ. ಚಲುವಾಂಬ ತಾಯಿ ಮಕ್ಕಳ ಆಸ್ಪತ್ರೆಯಲ್ಲಿಯೂ ಹಾಸಿಗೆಗಳ ಕೊರತೆ ಇದ್ದು, ಒಂದು ಹಾಸಿಗೆಯಲ್ಲಿ ಎರಡು ಮಕ್ಕಳನ್ನು ಮಲಗಿಸುತ್ತಿದ್ದಾರೆ. ಶಿಶು ಮರಣ ಪ್ರಮಾಣ ಶೇ.11.3 ರಷ್ಟಿದ್ದು, ಕೂಡಲೇ ಎರಡು ಆಸ್ಪತ್ರೆಯಲ್ಲೂ 100 ಹಾಸಿಗೆಯ ಐ.ಸಿ.ಯು ಘಟಕ ಸ್ಥಾಪಿಸಬೇಕು ಎಂದರು.

ಟ್ರಾಮಾ ಕೇರ್ ಸೆಂಟರ್ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಒ.ಪಿ.ಡಿ ಸೇವೆ ಮಾತ್ರ ಚಾಲ್ತಿಯಲ್ಲಿದೆ. ಇವು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಕ್ರಮವಹಿಸಬೇಕು. ಕೆ.ಆರ್.ಆಸ್ಪತ್ರೆಯಿಂದ 5 ಕಿ.ಮೀ. ದೂರದಲ್ಲಿರುವ ಈ ಆಸ್ಪತ್ರೆಗೆ ರೋಗಿಗಳನ್ನು ಸಾಗಿಸಲು ಕಷ್ಟವಾಗುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಯಂತೆ ಒಂದೇ ಆವರಣದಲ್ಲಿ ಕಟ್ಟಡ ನಿರ್ಮಿಸಿಬೇಕು. ಇದಕ್ಕಾಗಿ ಎಂಎಂಸಿ&ಆರ್‌ಐ ನಲ್ಲಿ ಸಾಕಷ್ಟು ಜಾಗ ಲಭ್ಯವಿದೆ. ಈ ಕ್ರಮದಿಂದಾಗಿ ತುರ್ತು ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಹೇಳಿದರು.

ಆಸ್ಪತ್ರೆಗೆ ಮತ್ತಷ್ಟು ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕು. ಇಲ್ಲಿ ಪರಿಣಿತ ವೈದ್ಯರಿದ್ದಾರೆ. ಆದರೆ ನರ್ಸ್‌ಗಳ ಕೊರತೆಯಿದ್ದು, ಹೊರಗುತ್ತಿಗೆಯಿಂದ ಪಡೆಯುವ ಸೇವೆಯಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್.ಪಾಟೀಲ್ ಅವರು, ಶೀಘ್ರದಲ್ಲೇ ಇನ್ಸಿಟ್ಯೂಟ್ ಆಫ್ ನೆಫ್ರಾಲಜಿ 100 ಹಾಸಿಗೆವುಳ್ಳ ಶಾಖೆ ನಿರ್ಮಾಣ ಮಾಡಲಾಗುತ್ತಿದೆ. ಒಳ ಮೀಸಲಾತಿ ನಿವಾರಣೆ ಕುರಿತು ಸಚಿವ ಸಂಪುಟದಲ್ಲಿ ಚರ್ಚಸಿ ತೀರ್ಮಾನ ಕೈಗೊಳ್ಳಲಾಗಿದೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲಾಗುವುದು. ಅಲ್ಲದೆ, 100 ಹಾಸಿಗೆವುಳ್ಳ ಐ.ಸಿ.ಯು ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

5 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

6 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

6 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

6 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

6 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

6 hours ago