ರಾಜ್ಯ

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ ವಿಲೇವಾರಿಯಲ್ಲಿ 100% ಸಾಧನೆ ಮಾಡಿದೆ.

ವಿಕಾಸಸೌಧದಲ್ಲಿರುವ ಕೃಷಿ ಸಚಿವರ ಕಛೇರಿಗೆ ಆಗಮಿಸಿದ ಸಾರ್ವಜನಿಕರಿಗೆ ವೇಗವಾದ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಕೃಷಿ ಸಚಿವರ ಸಿಬ್ಬಂದಿಯ ವಿಶೇಷ ಕಾಳಜಿಯಿಂದ ಎಲ್ಲಾ ಬಾಕಿ ಕಡತಗಳನ್ನು ಸಮಗ್ರವಾಗಿ ಪರಿಶೀಲಿಸಿ ಸಮಯಬದ್ಧವಾಗಿ ವಿಲೇವಾರಿ ಮಾಡಲಾಗಿದೆ‌. ಇದರ ಮೂಲಕ ಆಡಳಿತದ ದಕ್ಷತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಮಹತ್ವದ ಹೆಜ್ಜೆ ಇಡಲಾಗಿದೆ.

ಕಳೆದ ಮೂರು ವರ್ಷಗಳಿಂದಲೂ ಕೃಷಿ ಸಚಿವರ ಕಛೇರಿಯಲ್ಲಿ ನೂರು ಶೇಕಡ ಕಡತ ವಿಲೇವಾರಿ ಸಾಧನೆ ಮಾಡುತ್ತಾ ಬರಲಾಗಿದೆ. ಅನುಭವ ಮತ್ತು ಮಾರ್ಗಸೂಚಿಗಳನ್ನು ಆಧಾರವಾಗಿ ಪಡೆದುಕೊಂಡು ಈ ವರ್ಷವೂ ಸಮರ್ಪಕ ಯೋಜನೆ ಹಾಗೂ ಪರಿಣಾಮಕಾರಿ ಕಾರ್ಯ ಸಾಧನೆಗಳ ಮೂಲಕ ಈ ಸಾಧನೆ ಸಾಧ್ಯವಾಗಿದೆ.

2025-26 ನೇ ಸಾಲಿನಲ್ಲಿ ಕೃಷಿ ಸಚಿವರ ಕಚೇರಿಯಲ್ಲಿ ಒಟ್ಟು 909 ಕಡತಗಳನ್ನ ಪರಿಶೀಲಿಸಿ ನಿಯಮಾನುಸಾರ ಹಾಗು ಸಮಯಬದ್ಧವಾಗಿ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಹಾಗೇಯೆ ಮಾರ್ಚ್ ತಿಂಗಳ ಅಂತ್ಯಕ್ಕೆ ಒಟ್ಟು 4201 ಪತ್ರಗಳನ್ನು ಸ್ವೀಕರಿಸಿದ್ದು, ಎಲ್ಲಾ ಪತ್ರಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ.

ಇನ್ನೂ ವಿಧಾನಸಭೆ ಹಾಗೂ ವಿಧಾನಪರಿಷತ್ ನ ಮಾನ್ಯ ಸದಸ್ಯರು ಒಟ್ಟು 352 ಪ್ರಶ್ನೆಗಳನ್ನು ಕೃಷಿ ಇಲಾಖೆಗೆ ಕೇಳಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲಾಗಿದೆ.

ಈ ಸಾಧನೆಗೆ ಸಹಕರಿಸಿದ ಸಚಿವರ ಕಚೇರಿಯ ಆಪ್ತ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆಯ ಎಲ್ಲಾ ಸಿಬ್ಬಂದಿಯವರ ಪರಿಶ್ರಮವನ್ನು ಸಚಿವ ಎನ್.ಚಲುವರಾಯಸ್ವಾಮಿಯವರು ಸಹ ಪ್ರಶಂಸೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಕ್ಷಮತೆ ಹಾಗೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಮುಂದುವರೆಸಲು ಸಚಿವರು ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

8 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

8 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 hours ago