ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಬೇಕು. ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಬೇಕು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡಬೇಕು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಬೇಕು.
ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು.
ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿಗೆದುರಾಗಿ ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು.
ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಎಂಜಿನಿಯರುಗಳ ಸಭೆ ನಡೆಸಿ, ಲಿಂಟೆಲ್ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು.
ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸಬೇಕು.
ರಾಜೀವ್ ಗಾಂಧಿ ವಸತಿ ನಿಗಮದಡಿ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು.
ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಬರೆದುಕೊಂಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…