ರಾಜ್ಯ

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು ತೋಟಗಾರಿಕಾ ಮಹಾವಿದ್ಯಾಲಯದ ಆವರಣದಲ್ಲಿ ಜಲಾನಯನ ಇಲಾಖೆ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಕೃಷಿ ಉತ್ಪಾದಕ ಸಂಸ್ಥೆಗಳ ಮೇಳ ಉದ್ಘಾಟಿಸಿ ಸಚಿವರು ಮಾತನಾಡಿದರು.

ಸರ್ಕಾರವು ಪ್ರತಿ ರೈತ ಉತ್ಪಾಕದಕರ ಸಂಸ್ಥೆಗಳ ನಿರ್ವಹಣಾ ವೆಚ್ಚಕ್ಕಾಗಿ ಮೂರು ವರ್ಷಗಳಿಗೆ ಗರಿಷ್ಠ ರೂ.18 ಲಕ್ಷಗಳನ್ನು ನೀಡಲಾಗುತ್ತಿದೆ. ಸಂಸ್ಥೆಗಳ ರಚನೆ ಮತ್ತು ಉತ್ತೇಜನಕ್ಕಾಗಿ ಸಮುದಾಯ ಆಧಾರಿತ ವ್ಯವಹಾರ ಸಂಸ್ಥೆಗಳಿಗೆ ಐದು ವರ್ಷಗಳ ಅವಧಿಗೆ ಗರಿಷ್ಠ ರೂ. 25 ಲಕ್ಷಗಳನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಪ್ರತಿ ಷೇರುದಾರರಿಗೆ/ರೈತ ಸದಸ್ಯರಿಗೆ ಗರಿಷ್ಠ ರೂ.2000 ಮೀರದಂತೆ ಪ್ರತಿ ರೈತ ಉತ್ಪಾದಕರ ಸಂಸ್ಥೆಗೆ ಗರಿಷ್ಠ ರೂ.15 ಲಕ್ಷ ಇಕ್ವಿಟಿ ಅನುದಾನವನ್ನು ವ್ಯವಹಾರ ಬಂಡವಾಳವಾಗಿ ನೀಡಲಾಗುತ್ತಿದೆ ಎಂದು ಕೃಷಿ ಸಚಿವರು ಹೇಳಿದರು.

ಕೃಷಿ ಹಾಗೂ ಕೃಷಿಕರು ಅಭ್ಯುಧ್ಯುಯದ ಹಾದಿಯಲ್ಲಿ ಸಾಗುವ ಸುದಿನಗಳು ಪ್ರಾರಂಭವಾಗಿವೆ. ಕೃಷಿಕ ಎಲ್ಲಾ ರೀತಿಯಲ್ಲೂ ಸಬಲನಾಗಬೇಕು ಎಂಬುದು ಸರ್ಕಾರದ ಆಶಯ. ಅದಕ್ಕಾಗಿ ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಿ ಸಂಘಟಿಸಿ ಉತ್ಪಾದಕರ ಸರಪಳಿಯನ್ನು ಸದೃಡಗೊಳಿಸಲಾಗುತ್ತಿದೆ ಎಂದರು.

ಸಂಪೂರ್ಣ ಸಹಕಾರಿ ತತ್ವದಡಿಯಲ್ಲಿ ಕೃಷಿ ಉತ್ಪಾದಿತಕರ ಸಂಘಗಳು ಕಾರ್ಯ ನಿರ್ವಹಿಸುತ್ತಿದೆ. ರೈತರನ್ನು ಆರ್ಥಿಕ ಹಾಗೂ ಸಾಮಾಜಿಕವಾಗಿ ಸಮರ್ಥರನ್ನಾಗಿಸಲು ರೈತರಿಂದ ರೈತರಿಗಾಗಿ ರೈತರಿಗೋಸ್ಕರ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವರು ಹೇಳಿದರು.

FPO ಗಳ ಸ್ಥಾಪನೆಯಿಂದ ಮಧ್ಯವರ್ತಿಗಳ ಹಾವಳಿ ತಡೆಯಲು ಸಾಧ್ಯ. FPO ಗಳ ಸ್ಥಾಪನೆಯಿಂದ ಸ್ಥಳೀಯ ರೈತ ಸಮೂದಾಯದ ಸಾಮರ್ಥ್ಯ, ಅಭಿವೃದ್ಧಿ ಮತ್ತು ವ್ಯವಹಾರಿಕ ಪಾಲುದಾರಿಕೆ ಸಾಧ್ಯ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಮಾರುಕಟ್ಟಿಯಲ್ಲಿನ ಬೇಡಿಕೆ, ಪೂರೈಕೆ, ಮಾಹಿತಿ ವಿನಿಮಯ ಇದರ ಜೊತೆಗೆ ಮೌಲ್ಯ ಸರಪಳಿ ಹೆಚ್ಚಿಸಲು ನೆರವಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ನೀಡಿದೇ, 486 ಅಮೃತ ರೈತ ಉತ್ಪಾದಕರ ಸಂಸ್ಥೆಗಳನ್ನು ರಚಿಸಲಾಗಿತ್ತು. ನಮ್ಮ ಸರ್ಕಾರ ಈ ಈPಔ ಗಳಿಗೆ 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರ 21 ಕೋಟಿ ರೂಪಾಯಿ ಸಹಾಯಧನ ನೀಡಿದೆ ಎಂದು ಅವರು ತಿಳಿಸಿದರು.

ಭಾರತ ಸರ್ಕಾರದ 10 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ಸ್ಥಾಪನೆ ಮತ್ತು ಪ್ರೋತ್ಸಾಹ ಯೋಜನೆಯಡಿ ರಾಜ್ಯದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯ 100 FPO ಗಳು ಸೇರಿದಂತೆ 351 FPo ಗಳನ್ನ ರಚಿಸಲಾಗಿದೆ.

ಇವು ಕೃಷಿ ಪರಿಕರ ವ್ಯವಹಾರಗಳ (Input business) ಜೊತೆಗೆ ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆಗೊಳಿಸಿ ಮಾರಾಟ ಮಾಡುತ್ತಿರುವುದು (out put business ) ನಡೆಸುತ್ತಿರುವುದು ಸ್ವಾಗತಾರ್ಹ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ 10 ಸಾವಿರ ಈPಔ ಗಳ ಸ್ಥಾಪನೆ ಯೋಜನೆಯಡಿ ರಚಿಸಲಾದ ರೈತ ಉತ್ಪಾದಕ ಸಂಸ್ಥೆಗಳನ್ನು ಸುಸ್ಥಿರ ಮತ್ತು ದೀರ್ಘಾವಧಿಯಲ್ಲಿ ಕಾರ್ಯ ಸಾಧಿಸುವಂತೆ ಮಾಡಲು ಭಾರತ ಸರ್ಕಾರದ SFAC ಸಂಸ್ಥೆಯ ಜಲಾನಯನ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಲ್ಲಿ FPO ಮೇಳ ಆಯೋಜಿಸಿರುವುದು ಒಳ್ಳೆಯ ಕಾರ್ಯವಾಗಿದೆ ಎಂದು ಅವರು ಶ್ಲಾಘಿಸಿದರು.

ಎಫ್.ಪಿ.ಒ ಗಳಿಗೆ ಸಹಾಯಧನ ಬಿಡುಗಡೆ:-  ಕೃಷಿ ಸಚಿವರು ಕೃಷಿ ಉತ್ಪಾದಕರ ಸಂಸ್ಥೆಗಳಿಗೆ ರ‍್ಕಾರದ ನೆರವನ್ನು ಹಸ್ತಾಂತರಿಸಿದರು.

ಕರ‍್ಯಕ್ರಮದಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ವಿಷ್ಣುವರ್ಧನ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಮಹೇಶ್ ಶಿರೂರು, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಬಂಥನಾಳ್, ಕೃಷಿ ಇಲಾಖೆ ನಿರ್ದೇಶಕರಾದ ಡಾ.ಜಿ.ಟಿ.ಪುತ್ರ, ವಿಸ್ತಾರಣಾ ನಿರ್ದೇಶಕರಾದ ಡಾ.ಶಿವಲಿಂಗಯ್ಯ, ತೋಟಗಾರಿಕೆ ಕಾಲೇಜು ಡೀನ್ ಜಿ.ಎಸ್ ಸ್ವಾಮಿ, ಸಹಾಯಕ ಸಂಶೋಧನಾಕಾರಿ ಜಗದೀಶ್, ಎಸ್.ಎಫ್.ಎ.ಸಿ ಪ್ರತಿನಿಧಿ ಉತ್ತಮ್ ಕುಮಾರ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು

ಆಕರ್ಷಕ ಮೆರವಣಿಗೆ:- ಕಾರ್ಯಕ್ರಮಕ್ಕೂ ಮುನ್ನ ಕೃಷಿ ಸಚಿವರನ್ನು ಎತ್ತಿನ ಬಂಡಿ ಮೇಲೆ ಕರತರಲಾಯಿತು. ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರಗು ನೀಡಿದವು.

ಮಾರಾಟ ಮಳಿಗೆ ಉದ್ಘಾಟನೆ:– ಇದೇ ವೇಳೆ ಕೃಷಿ ಸಚಿವರು ವಿವಿಧ ಎಫ್.ಪಿ.ಒ ಗಳ ಮೌಲ್ಯರ‍್ಧಿತ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಉದ್ಘಾಟಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

9 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

10 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

10 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

11 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

11 hours ago