ರಾಮನಗರ : ಚಾರಣಕ್ಕೆ ಹೋಗಿದ್ದ ಆರು ಜನ ಯುವತಿಯರು ವಾಪಸ್ ಬರುವಾಗ ದಾರಿ ತಪ್ಪಿ ಕಾಡಿನಲ್ಲಿ ಅಲೆದಾಡಿ, ದಿಕ್ಕು ತೋಚದೆ ಕೊನೆಗೆ 112 ಸಹಾಯದ ಮೂಲಕ ಊರು ಸೇರಿದ ಘಟನೆ ರಾಮನಗರದಲ್ಲಿ ನಡೆದಿದೆ.
ಬೆಂಗಳೂರಿನಿಂದ ರಾಮನಗರದ ಹಂದಿಗೊಂದಿ ಬೆಟ್ಟಕ್ಕೆ ಚಾರಣಕ್ಕಾಗಿ ಬಂದಿದ್ದ ಆರು ಜನ ಹುಡುಗಿಯರು. ಚಾರಣ ಮುಗಿಸಿ ವಾಪಸ್ ಹೋಗುವಾಗ ಕಾಡಿನ ಮಧ್ಯೆ ದಾರಿ ತಪ್ಪಿದ್ದಾರೆ. ಹೊರಹೋಗಲು ದಾರಿ ಸಿಗದೆ ಕಾಡಿನಲ್ಲಿ ಅಲೆದಾಡಿದ್ದಾರೆ. ಕೊನೆಗೆ ತುರ್ತು ಸಂಖ್ಯೆ 112ಗೆ ಕರೆ ಮಾಡಿ ದಾರಿ ತಪ್ಪಿದ ಬಗ್ಗೆ ಪೊಲೀಸರಿಗೆ ಹುಡುಗಿರು ಮಾಹಿತಿ ನೀಡಿದ್ದಾರೆ.
ತಕ್ಷಣ ಕಾರ್ಯಪ್ರವೃತ್ತರಾಗಿ ಹುಡುಗಿರು ನೀಡಿದ ಮಾಹಿತಿಯ ಜಾಡು ಹಿಡಿದು ಹೊರಟ ರಾಮನಗರ ಐನೂರು ಪೊಲೀಸರು, ಹುಡುಗಿಯರ ರಕ್ಷಣೆಗೆ ಮುಂದಾದರು. ಬಸವನಪುರ ಗ್ರಾಮದ ಸುಮಾರು ಹತ್ತಕ್ಕೂ ಹೆಚ್ಚು ಜನರನ್ನು ಬಳಸಿಕೊಂಡು ಕಾರ್ಯಾಚರಣೆ ಮಾಡಿದ ಪೊಲೀಸರು ರಾತ್ರಿ ಸುಮಾರು 9 ಗಂಟೆಗೆ ಹುಡುಗಿಯರನ್ನು ಪತ್ತೆ ಮಾಡಿದರು. ದಾರಿ ತಪ್ಪಿದ್ದ ಹುಡುಗಿಯರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ಅವರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟರು.
ರಾಮನಗರ ವ್ಯಾಪ್ತಿ ಕಾಡುಪ್ರಾಣಿಗಳ ಹಾವಳಿಯೂ ಹೆಚ್ಚಾಗಿದೆ ಇಂಥ ಪರಿಸ್ಥಿತಿಯಲ್ಲಿ ಯುವತಿಯರು ದಾರಿ ತಪ್ಪಿದ್ದು ಪೊಲೀಸರಿಗೆ ಹೆಚ್ಚಿನ ತಲೆನೋವಾಗಿ ಪರಿಣಮಿಸಿದೆ. ಕೊನೆಗೆ ಗ್ರಾಮಸ್ಥರ ಸಹಾಯದಿಂದ ಹುಡುಗಿಯರನ್ನು ಹುಡುಕಿದ ಪೊಲೀಸರು, ಸುರಕ್ಷಿತವಾಗಿ ಬೆಂಗಳೂರಿಗೆ ಕಳಿಸಿಕೊಟ್ಟ ಬಳಿಕವೇ ನಿಟ್ಟುಸಿರು ಬಿಟ್ಟಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…