ರಾಜ್ಯ

ಚಾರಣಕ್ಕೆ ಬಂದು ದಾರಿ ತಪ್ಪಿದ ಹುಡುಗಿಯರ ರಕ್ಷಣೆ ಮಾಡಿದ 112

ರಾಮನಗರ : ಚಾರಣಕ್ಕೆ ಹೋಗಿದ್ದ ಆರು ಜನ ಯುವತಿಯರು ವಾಪಸ್ ಬರುವಾಗ ದಾರಿ ತಪ್ಪಿ ಕಾಡಿನಲ್ಲಿ ಅಲೆದಾಡಿ, ದಿಕ್ಕು ತೋಚದೆ ಕೊನೆಗೆ 112 ಸಹಾಯದ ಮೂಲಕ ಊರು ಸೇರಿದ ಘಟನೆ ರಾಮನಗರದಲ್ಲಿ ನಡೆದಿದೆ.

ಬೆಂಗಳೂರಿನಿಂದ ರಾಮನಗರದ ಹಂದಿಗೊಂದಿ ಬೆಟ್ಟಕ್ಕೆ ಚಾರಣಕ್ಕಾಗಿ ಬಂದಿದ್ದ ಆರು ಜನ ಹುಡುಗಿಯರು. ಚಾರಣ ಮುಗಿಸಿ ವಾಪಸ್ ಹೋಗುವಾಗ ಕಾಡಿನ ಮಧ್ಯೆ ದಾರಿ ತಪ್ಪಿದ್ದಾರೆ. ಹೊರಹೋಗಲು ದಾರಿ ಸಿಗದೆ ಕಾಡಿನಲ್ಲಿ ಅಲೆದಾಡಿದ್ದಾರೆ. ಕೊನೆಗೆ ತುರ್ತು ಸಂಖ್ಯೆ 112ಗೆ ಕರೆ ಮಾಡಿ ದಾರಿ ತಪ್ಪಿದ ಬಗ್ಗೆ ಪೊಲೀಸರಿಗೆ ಹುಡುಗಿರು ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾಗಿ ಹುಡುಗಿರು ನೀಡಿದ ಮಾಹಿತಿಯ ಜಾಡು ಹಿಡಿದು ಹೊರಟ ರಾಮನಗರ ಐನೂರು ಪೊಲೀಸರು, ಹುಡುಗಿಯರ ರಕ್ಷಣೆಗೆ ಮುಂದಾದರು. ಬಸವನಪುರ ಗ್ರಾಮದ ಸುಮಾರು ಹತ್ತಕ್ಕೂ ಹೆಚ್ಚು ಜನರನ್ನು ಬಳಸಿಕೊಂಡು ಕಾರ್ಯಾಚರಣೆ ಮಾಡಿದ ಪೊಲೀಸರು ರಾತ್ರಿ ಸುಮಾರು 9 ಗಂಟೆಗೆ ಹುಡುಗಿಯರನ್ನು ಪತ್ತೆ ಮಾಡಿದರು. ದಾರಿ ತಪ್ಪಿದ್ದ ಹುಡುಗಿಯರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ಅವರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟರು.

ರಾಮನಗರ ವ್ಯಾಪ್ತಿ ಕಾಡುಪ್ರಾಣಿಗಳ ಹಾವಳಿಯೂ ಹೆಚ್ಚಾಗಿದೆ ಇಂಥ ಪರಿಸ್ಥಿತಿಯಲ್ಲಿ ಯುವತಿಯರು ದಾರಿ ತಪ್ಪಿದ್ದು ಪೊಲೀಸರಿಗೆ ಹೆಚ್ಚಿನ ತಲೆನೋವಾಗಿ ಪರಿಣಮಿಸಿದೆ. ಕೊನೆಗೆ ಗ್ರಾಮಸ್ಥರ ಸಹಾಯದಿಂದ ಹುಡುಗಿಯರನ್ನು ಹುಡುಕಿದ ಪೊಲೀಸರು, ಸುರಕ್ಷಿತವಾಗಿ ಬೆಂಗಳೂರಿಗೆ ಕಳಿಸಿಕೊಟ್ಟ ಬಳಿಕವೇ ನಿಟ್ಟುಸಿರು ಬಿಟ್ಟಿದ್ದಾರೆ.

andolanait

Recent Posts

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

1 hour ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

3 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

3 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

3 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

3 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

3 hours ago