ರಾಜ್ಯ

ಚಾರಣಕ್ಕೆ ಬಂದು ದಾರಿ ತಪ್ಪಿದ ಹುಡುಗಿಯರ ರಕ್ಷಣೆ ಮಾಡಿದ 112

ರಾಮನಗರ : ಚಾರಣಕ್ಕೆ ಹೋಗಿದ್ದ ಆರು ಜನ ಯುವತಿಯರು ವಾಪಸ್ ಬರುವಾಗ ದಾರಿ ತಪ್ಪಿ ಕಾಡಿನಲ್ಲಿ ಅಲೆದಾಡಿ, ದಿಕ್ಕು ತೋಚದೆ ಕೊನೆಗೆ 112 ಸಹಾಯದ ಮೂಲಕ ಊರು ಸೇರಿದ ಘಟನೆ ರಾಮನಗರದಲ್ಲಿ ನಡೆದಿದೆ.

ಬೆಂಗಳೂರಿನಿಂದ ರಾಮನಗರದ ಹಂದಿಗೊಂದಿ ಬೆಟ್ಟಕ್ಕೆ ಚಾರಣಕ್ಕಾಗಿ ಬಂದಿದ್ದ ಆರು ಜನ ಹುಡುಗಿಯರು. ಚಾರಣ ಮುಗಿಸಿ ವಾಪಸ್ ಹೋಗುವಾಗ ಕಾಡಿನ ಮಧ್ಯೆ ದಾರಿ ತಪ್ಪಿದ್ದಾರೆ. ಹೊರಹೋಗಲು ದಾರಿ ಸಿಗದೆ ಕಾಡಿನಲ್ಲಿ ಅಲೆದಾಡಿದ್ದಾರೆ. ಕೊನೆಗೆ ತುರ್ತು ಸಂಖ್ಯೆ 112ಗೆ ಕರೆ ಮಾಡಿ ದಾರಿ ತಪ್ಪಿದ ಬಗ್ಗೆ ಪೊಲೀಸರಿಗೆ ಹುಡುಗಿರು ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾಗಿ ಹುಡುಗಿರು ನೀಡಿದ ಮಾಹಿತಿಯ ಜಾಡು ಹಿಡಿದು ಹೊರಟ ರಾಮನಗರ ಐನೂರು ಪೊಲೀಸರು, ಹುಡುಗಿಯರ ರಕ್ಷಣೆಗೆ ಮುಂದಾದರು. ಬಸವನಪುರ ಗ್ರಾಮದ ಸುಮಾರು ಹತ್ತಕ್ಕೂ ಹೆಚ್ಚು ಜನರನ್ನು ಬಳಸಿಕೊಂಡು ಕಾರ್ಯಾಚರಣೆ ಮಾಡಿದ ಪೊಲೀಸರು ರಾತ್ರಿ ಸುಮಾರು 9 ಗಂಟೆಗೆ ಹುಡುಗಿಯರನ್ನು ಪತ್ತೆ ಮಾಡಿದರು. ದಾರಿ ತಪ್ಪಿದ್ದ ಹುಡುಗಿಯರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ಅವರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟರು.

ರಾಮನಗರ ವ್ಯಾಪ್ತಿ ಕಾಡುಪ್ರಾಣಿಗಳ ಹಾವಳಿಯೂ ಹೆಚ್ಚಾಗಿದೆ ಇಂಥ ಪರಿಸ್ಥಿತಿಯಲ್ಲಿ ಯುವತಿಯರು ದಾರಿ ತಪ್ಪಿದ್ದು ಪೊಲೀಸರಿಗೆ ಹೆಚ್ಚಿನ ತಲೆನೋವಾಗಿ ಪರಿಣಮಿಸಿದೆ. ಕೊನೆಗೆ ಗ್ರಾಮಸ್ಥರ ಸಹಾಯದಿಂದ ಹುಡುಗಿಯರನ್ನು ಹುಡುಕಿದ ಪೊಲೀಸರು, ಸುರಕ್ಷಿತವಾಗಿ ಬೆಂಗಳೂರಿಗೆ ಕಳಿಸಿಕೊಟ್ಟ ಬಳಿಕವೇ ನಿಟ್ಟುಸಿರು ಬಿಟ್ಟಿದ್ದಾರೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

2 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

2 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

3 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

12 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

12 hours ago