ರಾಜ್ಯ

ವಿವಿಧ ಕ್ರೀಡಾಕೂಟದಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಭಾಗ್ಯ

ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳಿಗೆ ಸರ್ಕಾರವು ಬಂಪರ್‌ ಕೊಡುಗೆ ನೀಡಿದ್ದು, ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುನ್ನುಡಿ ಬರೆದಿದ್ದಾರೆ.

ಭಾನುವಾರ(ಆ.4) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್‌ಗಳಲ್ಲಿ ಪದಕ ವಿಜೇತ ಸಾಧಕ 12 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು.

ಈ ವೇಳೆ ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಯಾರಿಗೆ ಯಾವ ಹುದ್ದೆ?
ಗಿರೀಶ್‌ ಹೆಚ್,ಎನ್- ಕ್ಲಾಸ್‌ ಒನ್‌ ಆಫೀಸರ್‌ ಹುದ್ದೆ
ದಿವ್ಯಾ ಟಿ.ಎಸ್‌ – ಗ್ರೂಪ್‌ ಬಿ ಹುದ್ದೆ
ಉಷಾರಾಣಿ ಎನ್-‌ ಗ್ರೂಪ್‌ ಬಿ ಹುದ್ದೆ
ಸುಷ್ಮಿತ ಪವರ್‌ ಓ -‌ ಗ್ರೂಪ್‌ ಬಿ ಹುದ್ದೆ
ನಿಕ್ಕಿನ್‌ ತಿಮ್ಮಯ್ಯ -‌ ಗ್ರೂಪ್‌ ಬಿ ಹುದ್ದೆ
ಎಸ್.ವಿ ಸುನೀಲ್‌ -‌ ಗ್ರೂಪ್‌ ಬಿ ಹುದ್ದೆ
ಕಿಶನ್‌ ಗಂಗೊಳ್ಳಿ -‌ ಗ್ರೂಪ್‌ ಬಿ ಹುದ್ದೆ
ರಾಘವೇಂದ್ರ -‌ ಗ್ರೂಪ್‌ ಬಿ ಹುದ್ದೆ
ರಾಧಾ ವಿ -‌ ಗ್ರೂಪ್‌ ಬಿ ಹುದ್ದೆ
ಶರತ್‌ ಎಂ.ಎಸ್‌ -‌ ಗ್ರೂಪ್‌ ಬಿ ಹುದ್ದೆ
ಗುರುರಾಜು -‌ ಗ್ರೂಪ್‌ ಬಿ ಹುದ್ದೆ
ಮಲಪ್ರಭಾ ಯಲ್ಲಪ್ಪ ಜಾಧವ -‌ ಗ್ರೂಪ್‌ ಬಿ ಹುದ್ದೆ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

7 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

8 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

10 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

11 hours ago