ಬೆಂಗಳೂರು : ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು.
ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ.
ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.
ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಘೋಷಿಸಿದರು.
ಇವೆಲ್ಲಾ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…