ಬೆಂಗಳೂರು: ಜೆಡಿಎಸ್ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಜೆಡಿಎಸ್ ಎಂಎಲ್ಸಿ ಡಾ.ಸೂರಜ್ ರೇವಣ್ಣನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಸಂಬಂಧ ವಿವರಣೆ ನೀಡಲು ನಿನ್ನೆ ಸೂರಜ್ ರೇವಣ್ಣ ಹಾಸನದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ್ದರು. ವಿಚಾರಣೆ ನಡೆಸಿದ ಪೊಲೀಸರು ಸೂರಜ್ ರೇವಣ್ಣನನ್ನು ಬಂಧಿಸಿದ್ದರು.
ಇಂದು ಹಾಸನದ ಹಿಮ್ಸ್ನಲ್ಲಿ ಮೆಡಿಕಲ್ ಟೆಸ್ಟ್ಗೆ ಒಳಪಡಿಸಿದ ನಂತರ ಸೂರಜ್ ರೇವಣ್ಣನನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಸೂರಜ್ ರೇವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಪ್ರಕರಣ ಇನ್ನೂ ಅಧಿಕೃತವಾಗಿ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದಾರೆ ಎನ್ನಲಾದ ಸಂತ್ರಸ್ತನಿಗೂ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…