ರಾಜ್ಯ

ಏ.14 ರಂದು ಮೈಸೂರು, ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿಯು ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಎಂಬ ಹೊಸ ಪ್ರಚಾರ ಅಭಿಯಾನಕ್ಕೆ ವೇದಿಕೆ ಸಜ್ಜಾಗಿದೆ.

ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನೀಲ್‌ ಕುಮಾರ್‌, ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಸ್ಟಾರ್‌ ಪ್ರಚಾರಕರನ್ನು ಹೊರತುಪಡಿಸಿ ಕೇವಲ ಮೋದಿ ಅಭಿಮಾನಿಗಳನ್ನಷ್ಟೇ ಬಳಸಿಕೊಂಡು ಅಭಿಯಾನ ಆಯೋಜಿಸಲಾಗುತ್ತಿದೆ. ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇದೇ 21 ಹಾಗೂ ಎರಡನೇ ಸುತ್ತಿನಲ್ಲಿ ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇದೇ 28ರಂದು ಅಭಿಯಾನ ನಡೆಯಲಿದೆ ಎಂದು ಹೇಳಿದರು.

ಏ.21ರ ಅಭಿಯಾನದಲ್ಲಿ ಬೆಂಗಳೂರು ಸೇರಿದಂತೆ ನಗರ ಪ್ರದೇಶ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ನಿವಾಸಿಗಳು, ನಿವೃತ್ತ ಅಧಿಕಾರಿಗಳು, ಚಿತ್ರನಟರು, ಕಲಾವಿದರು, ಐಟಿ ಸೇರಿದಂತೆ ನಾನಾ ವೃತ್ತಿಯವರು ಮೋದಿ ಪರಿವಾರದ ಭಾಗವಾಗಲು ಆಸಕ್ತಿ ತೋರಿದ್ದು, ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅಭಿಮಾನಿಗಳು ವಾರಾಂತ್ಯದ ಒಂದು ದಿನವನ್ನು ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸುವ ಪ್ರಯತ್ನಕ್ಕೆ ತಮ್ಮ ಸಮಯ ವಿನಿಯೋಗಿಸುತ್ತಾರೆ ಎಂದು ತಿಳಿಸಿದರು.

ಮೈಸೂರಿನಲ್ಲಿ ಏಪ್ರಿಲ್‌ 14 ರಂದು ಮೈಸೂರಿನಲ್ಲಿ ಮೋದಿ ರ್ಯಾಲಿ ನಡೆಸಲಿದ್ದಾರೆ. ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ವೇದಿಕೆ ಹಂಚಿಕೊಳ್ಳುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
ದೇವೇಗೌಡರ ಉಪಸ್ಥಿತಿಯಿಂದ ಹಳೇ ಮೈಸೂರು ಭಾಗದಲ್ಲಿ ತಮ್ಮ ಪಕ್ಷಕ್ಕೆ ಬಲ ಬರಲಿದೆ, ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದಿವೆ ಮೂಲಗಳು.

ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ವರೆಗೆ ಸುಮಾರು 2 ಕಿ.ಮೀ ವರೆಗೆ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಇದು ಬಲ್ಲಾಳ್‌ಬಾಗ್, ಪಿವಿಎಸ್ ಜಂಕ್ಷನ್ ಮತ್ತು ನವಭಾರತ ವೃತ್ತದ ಮೂಲಕ ಹಾದುಹೋಗುತ್ತದೆ. ರೋಡ್ ಶೋ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಪಕ್ಷವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಿದೆ ಎಂದು ಹೇಳಿದರು. ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ, ಮಂಗಳೂರು, ಮೂಡುಬಿದಿರೆಯಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

5 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

32 mins ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

1 hour ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

2 hours ago

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…

2 hours ago

ಓದುಗರ ಪತ್ರ | ನೀರು ಪೋಲು ಮಾಡದಂತೆ ಜಾಗೃತಿ ಮೂಡಿಸಿ

ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…

2 hours ago