ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಸಾಹಿತ್ಯ ಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಐವರು ಹಿರಿಯ ಸಾಹಿತಿಗಳಿಗೆ ವಾರ್ಷಿಕ ಗೌರವ ಹಾಗೂ 10 ಮಂದಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ದೊರೆತಿದೆ.
ಕನ್ನಡ ಸಾರಸತ್ವ ಲೋಕದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಐವರು ಹಿರಿಯ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ನಿರ್ಧಾರ ಮಾಡಲಾಗಿದೆ.
ಗೌರವ ಪ್ರಶಸ್ತಿ ಪುರಸ್ಕೃತರು:
ಡಾ.ಸಿ.ವೀರಣ್ಣ ಬೆಂಗಳೂರು, ಡಾ.ಶ್ರೀರಾಮ ಹಿಟ್ಟಣ ಬಾಗಲಕೋಟೆ, ಜಾಣಗೆರೆ ವೆಂಕಟರಾಮಯ್ಯ ತುಮಕೂರು, ಎಂ.ಎಂ.ಮದರಿ ಕೊಪ್ಪಳ, ಡಾ.ಸಬೀಹಾ ಭೂಮಿಗೌಡ ಮಂಗಳೂರು ಇವರು ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದು, 50 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿದೆ.
ಮಾರ್ಚ್.24ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಾಹಿತ್ಯ ಶ್ರೀ ಪ್ರಶಸ್ತಿ ಪುರಸ್ಕೃತರು:
ಮೈಸೂರಿನ ಡಾ.ಎಂ.ಎನ್.ಶೇಖರ್, ಬೆಂಗಳೂರಿನ ಜಿ.ಎನ್.ಮೋಹನ್, ತುಮಕೂರಿನ ಡಾ.ಟಿ.ಎಸ್.ವಿವೇಕಾನಂದ, ಬೆಳಗಾವಿಯ ಡಾ.ಜಯಶ್ರೀ ಕಂಬಾರ, ಧಾರವಾಡದ ನಿಜಲಿಂಗಪ್ಪ ಯಮನಪ್ಪ ಮಟ್ಟಿಹಾಳ, ಕೋಲಾರ ಡಾ.ಬಾಲಗುರುಮೂರ್ತಿ, ಕಲಬುರ್ಗಿಯ ಪ್ರೊ.ಶಿವಗಂಗಾರುಮ್ಮ, ಬೆಂಗಳೂರಿನ ಡಾ.ರೀಟಾರೀನಿ, ಶಿವಮೊಗ್ಗದ ಡಾ.ಕಲೀಂವುಲ್ಲಾ ಹಾಗೂ ಬಳ್ಳಾರಿಯ ಡಾ.ವೆಂಕಟಗಿರಿ ದಳವಾಯಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…