ರಾಜ್ಯ

ರಾಜ್ಯದಲ್ಲಿ 15000 ಕೋಟಿ ರಾಜಸ್ವ ಕೊರತೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಸಕ್ತ ಹಣಕಾಸು ವರ್ಷ ಯಾವುದೇ ಇಲಾಖೆಯಲ್ಲಿ ಬಜೆಟ್ ನಲ್ಲಿ ಘೋಷಿಸಿದ ಅನುದಾನದ ಶೇ.40ಕ್ಕಿಂತ ಹೆಚ್ಚು ವಿನಿಯೋಗಿಸಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಇಲಾಖೆಯಿಂದ ಕೇವಲ ಶೇ.10 ರಷ್ಟು ಮಾತ್ರ ಅನುದಾನ ಖರ್ಚು ಮಾಡಲಾಗಿದೆ ಎಂದರು. ತೆರಿಗೆ ಸಂಗ್ರಹದಲ್ಲಿ ಸಹ ಹಿಂದೆ ಬಿದ್ದ ಪರಿಣಾಮವಾಗಿ ಈ ವರ್ಷ ಸುಮಾರು 15 ಸಾವಿರ ಕೋಟಿ ರೂ. ನಿವ್ವಳ ರಾಜಸ್ವ ಕೊರತೆ ಉಂಟಾಗುತ್ತದೆ ಎಂದ ಅವರು, ಕರ್ನಾಟಕ ಪಬ್ಲಿಕ್ ಶಾಲೆ ಆರಂಭಕ್ಕೆ ಕೈಗಾರಿಕೆಗಳ ಸಿಎಸ್ ಆರ್ ನಿಧಿಯನ್ನು ಅವಲಂಬಿಸಿದೆ. ಇದಕ್ಕಾಗಿ ರಾಜ್ಯದ ಕೈಗಾರಿಕೆಗಳು ಸದರಿ ನಿಧಿಯನ್ನು ರಾಜ್ಯಕ್ಕೆ ವಿನಿಯೋಗಿಸುವ ಬಗ್ಗೆ ನಿಯಮ ಜಾರಿಗೆ ಮುಂದಾಗಿರುವುದು ವಿಪರ್ಯಾಸ ಸಂಗತಿ ಎಂದರು.

ನೀರಾವರಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದ್ದ ಸಚಿವರು ವೈಯಕ್ತಿಕ ಸಂಪಾದನೆಗಾಗಿ ಬೆಂಗಳೂರು ಜಿಲ್ಲೆಯ ಹೆಸರು ಬದಲಾಯಿಸಲು ಉತ್ಸುಕರಾಗಿದ್ದಾರೆಂದು ಡಿಕೆಶಿ ವಿರುದ್ಧ ಕಿಡಿಕಾರಿದರು. ಸಿಎಂ ಮತ್ತು ಡಿಸಿಎಂ ಕುರ್ಚಿ ಕಾದಾಟದ ಪರಿಣಾಮ ಆಡಳಿತ ಸಂಪೂರ್ಣ ನಿಷ್ಕ್ರಿಯ ಗೊಂಡಿದ್ದು, ಇದರ ಲಾಭ ಪಡೆದು ಅಧಿಕಾರಿಗಳು ಸಹ ವೈಯಕ್ತಿಕ ಲಾಭ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆಂದು ದೂರಿದರು.

ಇದನ್ನು ಓದಿ: ದಿತ್ವಾ ಚಂಡಮಾರುತ ಎಫೆಕ್ಟ್:‌ ರಾಜ್ಯದಲ್ಲಿ ವಾತಾವರಣ ಕೂಲ್‌ ಕೂಲ್‌

ಪೋಲಿಸ್ ಇಲಾಖೆಯಿಂದಲೇ ಲೂಟಿ!
2014ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮೈಸೂರಿನ ಉದ್ಯಮಿಯ ಚಿನ್ನವನ್ನು ಪೋಲಿಸರು ಲೂಟಿ ಮಾಡಿದ್ದರು. ಈಗ ಮತ್ತೆ ಅದೇರೀತಿ ಪೋಲಿಸರ ಸಹಕಾರದಿಂದ ಬ್ಯಾಂಕ್ ಹಣ ಮತ್ತು ಚಿನ್ನ ಲೂಟಿ ಮಾಡಲಾಗುತ್ತಿದೆ. ಇತ್ತೀಚಿನ ಬೆಂಗಳೂರು ಬ್ಯಾಂಕ್ ಹಣ ಲೂಟಿ ಪ್ರಕರಣದಲ್ಲಿ ಪೋಲಿಸ್ ಭಾಗಿಯಾಗಿದ್ದ. ದಾವಣಗೆರೆ ಚಿನ್ನದ ವ್ಯಾಪಾರಿಯ ಚಿನ್ನ ಲಪಟಾವಣೆಯಲ್ಲಿ ಸಹ ಪೋಲಿಸರಿದ್ದರು. ಬೆಂಗಳೂರು ಹಣ ಲೂಟಿ ಪತ್ತೆ ಮಾಡುವಲ್ಲಿ ಗೃಹ ಸಚಿವರು ಪೋಲಿಸರಿಗೆ ಶಹಬ್ಬಾಸ್ ಗಿರಿ ಕೊಡುವ ಬದಲು ಹಣ ಲೂಟಿಕೋರರು ಬಳಸಿದ್ದ ಕಾರಿನ ಮಾಲೀಕನಿಗೆ ಅದರಲ್ಲಿ ಜಿಪಿಎಸ್ ಅಳವಡಿಸಿದ್ದಕ್ಕಾಗಿ ಆತನಿಗೆ ಶಹಬ್ಬಾಸ್ ಎನ್ನಬೇಕಿತ್ತು. ಇನ್ನು ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಜೈಲುಗಳಲ್ಲಿ ಖೈದಿಗಳ ಕೈಗೆ ಮೊಬೈಲ್ ಅಷ್ಟೇ ಅಲ್ಲದೇ ಮದ್ಯ, ಮಾದಕ ವಸ್ತುಗಳು ನಿರಾಯಾಸವಾಗಿ ಸಿಗುತ್ತದೆ ಎಂದರೆ ಸರ್ಕಾರದ ವೈಫಲ್ಯ ಎನ್ನದೇ ಏನೆನ್ನಬೇಕೆಂದು ಕುಮಾರಸ್ವಾಮಿ ಪ್ರಶ್ನಿಸಿದರು.

2 ತಿಂಗಳಲ್ಲಿ ವಿಐಎಸ್ ಎಲ್ ಪುನಶ್ಚೇತನ ಕಾರ್ಯ ಆರಂಭ
ಕೇಂದ್ರ ಉಕ್ಕು ಪ್ರಾಧಿಕಾರಕ್ಕೆ ಸೇರಿದ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಬಂಡವಾಳ ಹಿಂತೆಗೆತಕ್ಕೆ ಕೇಂದ್ರ ಸಚಿವ ಸಂಪುಟ ಈ ಹಿಂದೆ ನಿರ್ಧರಿಸಿತ್ತು. ಆದರೆ ಪ್ರಧಾನಿಯವರ ಮನವೊಲಿಸಿ ಅದನ್ನು ಕೈಬಿಟ್ಟು ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 4 ಸಾವಿರ ಕೋಟಿ ವೆಚ್ಚದಲ್ಲಿ ಕಾರ್ಖಾನೆ ಆಧುನೀಕರಣಗೊಳಿಸಿ ರಕ್ಷಣಾ ಮತ್ತು ರೈಲ್ವೆ ಇಲಾಖೆಗೆ ಅಗತ್ಯ ಉತ್ಪನ್ನಗಳ ತಯಾರಿಕೆ ಕುರಿತು ಡಿಪಿಎಆರ್ ಸಿದ್ದಪಡಿಸಿದೆ. ಇಷ್ಟೇ ಅಲ್ಲದೇ ಮುಂದಿನ 50 ವರ್ಷದ ಅವಧಿಗೆ ಕಾರ್ಖಾನೆ ಯಾವುದೇ ಕೊರತೆ ಎದುರಿಸಬಾರದ ರೀತಿಯಲ್ಲಿ ಡಿಪಿಎಆರ್ ತಯಾರಿಸಲು ಸೂಚಿಸಲಾಗಿದೆ. ಈ ಕಾರ್ಖಾನೆಗೆ ಬೇಕಾಗುವ ಅದಿರನ್ನು ಈ ಹಿಂದೆ ಗುರುತಿಸಿರುವ ಪ್ರದೇಶದಲ್ಲಿ ಗಣಿಗಾರಿಕೆ ಮೂಲಕ ಪಡೆಯಲಾಗುವುದೆಂದು ಕುಮಾರಸ್ವಾಮಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

3 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

5 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

5 hours ago