ರಾಜ್ಯ

ರಾಜ್ಯದಲ್ಲಿ 15000 ಕೋಟಿ ರಾಜಸ್ವ ಕೊರತೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಸಕ್ತ ಹಣಕಾಸು ವರ್ಷ ಯಾವುದೇ ಇಲಾಖೆಯಲ್ಲಿ ಬಜೆಟ್ ನಲ್ಲಿ ಘೋಷಿಸಿದ ಅನುದಾನದ ಶೇ.40ಕ್ಕಿಂತ ಹೆಚ್ಚು ವಿನಿಯೋಗಿಸಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಇಲಾಖೆಯಿಂದ ಕೇವಲ ಶೇ.10 ರಷ್ಟು ಮಾತ್ರ ಅನುದಾನ ಖರ್ಚು ಮಾಡಲಾಗಿದೆ ಎಂದರು. ತೆರಿಗೆ ಸಂಗ್ರಹದಲ್ಲಿ ಸಹ ಹಿಂದೆ ಬಿದ್ದ ಪರಿಣಾಮವಾಗಿ ಈ ವರ್ಷ ಸುಮಾರು 15 ಸಾವಿರ ಕೋಟಿ ರೂ. ನಿವ್ವಳ ರಾಜಸ್ವ ಕೊರತೆ ಉಂಟಾಗುತ್ತದೆ ಎಂದ ಅವರು, ಕರ್ನಾಟಕ ಪಬ್ಲಿಕ್ ಶಾಲೆ ಆರಂಭಕ್ಕೆ ಕೈಗಾರಿಕೆಗಳ ಸಿಎಸ್ ಆರ್ ನಿಧಿಯನ್ನು ಅವಲಂಬಿಸಿದೆ. ಇದಕ್ಕಾಗಿ ರಾಜ್ಯದ ಕೈಗಾರಿಕೆಗಳು ಸದರಿ ನಿಧಿಯನ್ನು ರಾಜ್ಯಕ್ಕೆ ವಿನಿಯೋಗಿಸುವ ಬಗ್ಗೆ ನಿಯಮ ಜಾರಿಗೆ ಮುಂದಾಗಿರುವುದು ವಿಪರ್ಯಾಸ ಸಂಗತಿ ಎಂದರು.

ನೀರಾವರಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದ್ದ ಸಚಿವರು ವೈಯಕ್ತಿಕ ಸಂಪಾದನೆಗಾಗಿ ಬೆಂಗಳೂರು ಜಿಲ್ಲೆಯ ಹೆಸರು ಬದಲಾಯಿಸಲು ಉತ್ಸುಕರಾಗಿದ್ದಾರೆಂದು ಡಿಕೆಶಿ ವಿರುದ್ಧ ಕಿಡಿಕಾರಿದರು. ಸಿಎಂ ಮತ್ತು ಡಿಸಿಎಂ ಕುರ್ಚಿ ಕಾದಾಟದ ಪರಿಣಾಮ ಆಡಳಿತ ಸಂಪೂರ್ಣ ನಿಷ್ಕ್ರಿಯ ಗೊಂಡಿದ್ದು, ಇದರ ಲಾಭ ಪಡೆದು ಅಧಿಕಾರಿಗಳು ಸಹ ವೈಯಕ್ತಿಕ ಲಾಭ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆಂದು ದೂರಿದರು.

ಇದನ್ನು ಓದಿ: ದಿತ್ವಾ ಚಂಡಮಾರುತ ಎಫೆಕ್ಟ್:‌ ರಾಜ್ಯದಲ್ಲಿ ವಾತಾವರಣ ಕೂಲ್‌ ಕೂಲ್‌

ಪೋಲಿಸ್ ಇಲಾಖೆಯಿಂದಲೇ ಲೂಟಿ!
2014ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮೈಸೂರಿನ ಉದ್ಯಮಿಯ ಚಿನ್ನವನ್ನು ಪೋಲಿಸರು ಲೂಟಿ ಮಾಡಿದ್ದರು. ಈಗ ಮತ್ತೆ ಅದೇರೀತಿ ಪೋಲಿಸರ ಸಹಕಾರದಿಂದ ಬ್ಯಾಂಕ್ ಹಣ ಮತ್ತು ಚಿನ್ನ ಲೂಟಿ ಮಾಡಲಾಗುತ್ತಿದೆ. ಇತ್ತೀಚಿನ ಬೆಂಗಳೂರು ಬ್ಯಾಂಕ್ ಹಣ ಲೂಟಿ ಪ್ರಕರಣದಲ್ಲಿ ಪೋಲಿಸ್ ಭಾಗಿಯಾಗಿದ್ದ. ದಾವಣಗೆರೆ ಚಿನ್ನದ ವ್ಯಾಪಾರಿಯ ಚಿನ್ನ ಲಪಟಾವಣೆಯಲ್ಲಿ ಸಹ ಪೋಲಿಸರಿದ್ದರು. ಬೆಂಗಳೂರು ಹಣ ಲೂಟಿ ಪತ್ತೆ ಮಾಡುವಲ್ಲಿ ಗೃಹ ಸಚಿವರು ಪೋಲಿಸರಿಗೆ ಶಹಬ್ಬಾಸ್ ಗಿರಿ ಕೊಡುವ ಬದಲು ಹಣ ಲೂಟಿಕೋರರು ಬಳಸಿದ್ದ ಕಾರಿನ ಮಾಲೀಕನಿಗೆ ಅದರಲ್ಲಿ ಜಿಪಿಎಸ್ ಅಳವಡಿಸಿದ್ದಕ್ಕಾಗಿ ಆತನಿಗೆ ಶಹಬ್ಬಾಸ್ ಎನ್ನಬೇಕಿತ್ತು. ಇನ್ನು ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಜೈಲುಗಳಲ್ಲಿ ಖೈದಿಗಳ ಕೈಗೆ ಮೊಬೈಲ್ ಅಷ್ಟೇ ಅಲ್ಲದೇ ಮದ್ಯ, ಮಾದಕ ವಸ್ತುಗಳು ನಿರಾಯಾಸವಾಗಿ ಸಿಗುತ್ತದೆ ಎಂದರೆ ಸರ್ಕಾರದ ವೈಫಲ್ಯ ಎನ್ನದೇ ಏನೆನ್ನಬೇಕೆಂದು ಕುಮಾರಸ್ವಾಮಿ ಪ್ರಶ್ನಿಸಿದರು.

2 ತಿಂಗಳಲ್ಲಿ ವಿಐಎಸ್ ಎಲ್ ಪುನಶ್ಚೇತನ ಕಾರ್ಯ ಆರಂಭ
ಕೇಂದ್ರ ಉಕ್ಕು ಪ್ರಾಧಿಕಾರಕ್ಕೆ ಸೇರಿದ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಬಂಡವಾಳ ಹಿಂತೆಗೆತಕ್ಕೆ ಕೇಂದ್ರ ಸಚಿವ ಸಂಪುಟ ಈ ಹಿಂದೆ ನಿರ್ಧರಿಸಿತ್ತು. ಆದರೆ ಪ್ರಧಾನಿಯವರ ಮನವೊಲಿಸಿ ಅದನ್ನು ಕೈಬಿಟ್ಟು ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 4 ಸಾವಿರ ಕೋಟಿ ವೆಚ್ಚದಲ್ಲಿ ಕಾರ್ಖಾನೆ ಆಧುನೀಕರಣಗೊಳಿಸಿ ರಕ್ಷಣಾ ಮತ್ತು ರೈಲ್ವೆ ಇಲಾಖೆಗೆ ಅಗತ್ಯ ಉತ್ಪನ್ನಗಳ ತಯಾರಿಕೆ ಕುರಿತು ಡಿಪಿಎಆರ್ ಸಿದ್ದಪಡಿಸಿದೆ. ಇಷ್ಟೇ ಅಲ್ಲದೇ ಮುಂದಿನ 50 ವರ್ಷದ ಅವಧಿಗೆ ಕಾರ್ಖಾನೆ ಯಾವುದೇ ಕೊರತೆ ಎದುರಿಸಬಾರದ ರೀತಿಯಲ್ಲಿ ಡಿಪಿಎಆರ್ ತಯಾರಿಸಲು ಸೂಚಿಸಲಾಗಿದೆ. ಈ ಕಾರ್ಖಾನೆಗೆ ಬೇಕಾಗುವ ಅದಿರನ್ನು ಈ ಹಿಂದೆ ಗುರುತಿಸಿರುವ ಪ್ರದೇಶದಲ್ಲಿ ಗಣಿಗಾರಿಕೆ ಮೂಲಕ ಪಡೆಯಲಾಗುವುದೆಂದು ಕುಮಾರಸ್ವಾಮಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

10 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

11 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

11 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

11 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

11 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

11 hours ago