ರಾಜ್ಯ

ರಾಜ್ಯದಲ್ಲಿ 15000 ಕೋಟಿ ರಾಜಸ್ವ ಕೊರತೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಸಕ್ತ ಹಣಕಾಸು ವರ್ಷ ಯಾವುದೇ ಇಲಾಖೆಯಲ್ಲಿ ಬಜೆಟ್ ನಲ್ಲಿ ಘೋಷಿಸಿದ ಅನುದಾನದ ಶೇ.40ಕ್ಕಿಂತ ಹೆಚ್ಚು ವಿನಿಯೋಗಿಸಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಇಲಾಖೆಯಿಂದ ಕೇವಲ ಶೇ.10 ರಷ್ಟು ಮಾತ್ರ ಅನುದಾನ ಖರ್ಚು ಮಾಡಲಾಗಿದೆ ಎಂದರು. ತೆರಿಗೆ ಸಂಗ್ರಹದಲ್ಲಿ ಸಹ ಹಿಂದೆ ಬಿದ್ದ ಪರಿಣಾಮವಾಗಿ ಈ ವರ್ಷ ಸುಮಾರು 15 ಸಾವಿರ ಕೋಟಿ ರೂ. ನಿವ್ವಳ ರಾಜಸ್ವ ಕೊರತೆ ಉಂಟಾಗುತ್ತದೆ ಎಂದ ಅವರು, ಕರ್ನಾಟಕ ಪಬ್ಲಿಕ್ ಶಾಲೆ ಆರಂಭಕ್ಕೆ ಕೈಗಾರಿಕೆಗಳ ಸಿಎಸ್ ಆರ್ ನಿಧಿಯನ್ನು ಅವಲಂಬಿಸಿದೆ. ಇದಕ್ಕಾಗಿ ರಾಜ್ಯದ ಕೈಗಾರಿಕೆಗಳು ಸದರಿ ನಿಧಿಯನ್ನು ರಾಜ್ಯಕ್ಕೆ ವಿನಿಯೋಗಿಸುವ ಬಗ್ಗೆ ನಿಯಮ ಜಾರಿಗೆ ಮುಂದಾಗಿರುವುದು ವಿಪರ್ಯಾಸ ಸಂಗತಿ ಎಂದರು.

ನೀರಾವರಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದ್ದ ಸಚಿವರು ವೈಯಕ್ತಿಕ ಸಂಪಾದನೆಗಾಗಿ ಬೆಂಗಳೂರು ಜಿಲ್ಲೆಯ ಹೆಸರು ಬದಲಾಯಿಸಲು ಉತ್ಸುಕರಾಗಿದ್ದಾರೆಂದು ಡಿಕೆಶಿ ವಿರುದ್ಧ ಕಿಡಿಕಾರಿದರು. ಸಿಎಂ ಮತ್ತು ಡಿಸಿಎಂ ಕುರ್ಚಿ ಕಾದಾಟದ ಪರಿಣಾಮ ಆಡಳಿತ ಸಂಪೂರ್ಣ ನಿಷ್ಕ್ರಿಯ ಗೊಂಡಿದ್ದು, ಇದರ ಲಾಭ ಪಡೆದು ಅಧಿಕಾರಿಗಳು ಸಹ ವೈಯಕ್ತಿಕ ಲಾಭ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆಂದು ದೂರಿದರು.

ಇದನ್ನು ಓದಿ: ದಿತ್ವಾ ಚಂಡಮಾರುತ ಎಫೆಕ್ಟ್:‌ ರಾಜ್ಯದಲ್ಲಿ ವಾತಾವರಣ ಕೂಲ್‌ ಕೂಲ್‌

ಪೋಲಿಸ್ ಇಲಾಖೆಯಿಂದಲೇ ಲೂಟಿ!
2014ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮೈಸೂರಿನ ಉದ್ಯಮಿಯ ಚಿನ್ನವನ್ನು ಪೋಲಿಸರು ಲೂಟಿ ಮಾಡಿದ್ದರು. ಈಗ ಮತ್ತೆ ಅದೇರೀತಿ ಪೋಲಿಸರ ಸಹಕಾರದಿಂದ ಬ್ಯಾಂಕ್ ಹಣ ಮತ್ತು ಚಿನ್ನ ಲೂಟಿ ಮಾಡಲಾಗುತ್ತಿದೆ. ಇತ್ತೀಚಿನ ಬೆಂಗಳೂರು ಬ್ಯಾಂಕ್ ಹಣ ಲೂಟಿ ಪ್ರಕರಣದಲ್ಲಿ ಪೋಲಿಸ್ ಭಾಗಿಯಾಗಿದ್ದ. ದಾವಣಗೆರೆ ಚಿನ್ನದ ವ್ಯಾಪಾರಿಯ ಚಿನ್ನ ಲಪಟಾವಣೆಯಲ್ಲಿ ಸಹ ಪೋಲಿಸರಿದ್ದರು. ಬೆಂಗಳೂರು ಹಣ ಲೂಟಿ ಪತ್ತೆ ಮಾಡುವಲ್ಲಿ ಗೃಹ ಸಚಿವರು ಪೋಲಿಸರಿಗೆ ಶಹಬ್ಬಾಸ್ ಗಿರಿ ಕೊಡುವ ಬದಲು ಹಣ ಲೂಟಿಕೋರರು ಬಳಸಿದ್ದ ಕಾರಿನ ಮಾಲೀಕನಿಗೆ ಅದರಲ್ಲಿ ಜಿಪಿಎಸ್ ಅಳವಡಿಸಿದ್ದಕ್ಕಾಗಿ ಆತನಿಗೆ ಶಹಬ್ಬಾಸ್ ಎನ್ನಬೇಕಿತ್ತು. ಇನ್ನು ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಜೈಲುಗಳಲ್ಲಿ ಖೈದಿಗಳ ಕೈಗೆ ಮೊಬೈಲ್ ಅಷ್ಟೇ ಅಲ್ಲದೇ ಮದ್ಯ, ಮಾದಕ ವಸ್ತುಗಳು ನಿರಾಯಾಸವಾಗಿ ಸಿಗುತ್ತದೆ ಎಂದರೆ ಸರ್ಕಾರದ ವೈಫಲ್ಯ ಎನ್ನದೇ ಏನೆನ್ನಬೇಕೆಂದು ಕುಮಾರಸ್ವಾಮಿ ಪ್ರಶ್ನಿಸಿದರು.

2 ತಿಂಗಳಲ್ಲಿ ವಿಐಎಸ್ ಎಲ್ ಪುನಶ್ಚೇತನ ಕಾರ್ಯ ಆರಂಭ
ಕೇಂದ್ರ ಉಕ್ಕು ಪ್ರಾಧಿಕಾರಕ್ಕೆ ಸೇರಿದ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಬಂಡವಾಳ ಹಿಂತೆಗೆತಕ್ಕೆ ಕೇಂದ್ರ ಸಚಿವ ಸಂಪುಟ ಈ ಹಿಂದೆ ನಿರ್ಧರಿಸಿತ್ತು. ಆದರೆ ಪ್ರಧಾನಿಯವರ ಮನವೊಲಿಸಿ ಅದನ್ನು ಕೈಬಿಟ್ಟು ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 4 ಸಾವಿರ ಕೋಟಿ ವೆಚ್ಚದಲ್ಲಿ ಕಾರ್ಖಾನೆ ಆಧುನೀಕರಣಗೊಳಿಸಿ ರಕ್ಷಣಾ ಮತ್ತು ರೈಲ್ವೆ ಇಲಾಖೆಗೆ ಅಗತ್ಯ ಉತ್ಪನ್ನಗಳ ತಯಾರಿಕೆ ಕುರಿತು ಡಿಪಿಎಆರ್ ಸಿದ್ದಪಡಿಸಿದೆ. ಇಷ್ಟೇ ಅಲ್ಲದೇ ಮುಂದಿನ 50 ವರ್ಷದ ಅವಧಿಗೆ ಕಾರ್ಖಾನೆ ಯಾವುದೇ ಕೊರತೆ ಎದುರಿಸಬಾರದ ರೀತಿಯಲ್ಲಿ ಡಿಪಿಎಆರ್ ತಯಾರಿಸಲು ಸೂಚಿಸಲಾಗಿದೆ. ಈ ಕಾರ್ಖಾನೆಗೆ ಬೇಕಾಗುವ ಅದಿರನ್ನು ಈ ಹಿಂದೆ ಗುರುತಿಸಿರುವ ಪ್ರದೇಶದಲ್ಲಿ ಗಣಿಗಾರಿಕೆ ಮೂಲಕ ಪಡೆಯಲಾಗುವುದೆಂದು ಕುಮಾರಸ್ವಾಮಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

1 hour ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 hours ago