ರಾಜ್ಯ

18 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು : ಗಣನೀಯ ಸೇವೆ ಸಲ್ಲಿಸಿದ 18 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕ ಲಭಿಸಿದೆ. ಲೋಕಾಯುಕ್ತ ಬೆಂಗಳೂರು ಕೇಂದ್ರದಲ್ಲಿ ಎಸ್‌ಪಿಯಾಗಿರುವ ಎಸ್. ಬದ್ರಿನಾಥ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಲಭಿಸಿದೆ. ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ರಾಷ್ಟ್ರಪತಿಗಳಿಂದ ಪ್ರಶಂಸೆ ವ್ಯಕ್ತಪಡಿಸಿ ವಿಶಿಷ್ಟ ಸೇವಾ ಪದಕವನ್ನು ನೀಡಲಾಗುತ್ತಿದೆ.

ರಾಜ್ಯ ಗುಪ್ತಚರ ಐಜಿಪಿ ಡಾ. ಚಂದ್ರಗುಪ್ತ, ಎಐಜಿಪಿ (ಅಪರಾಧ ಮುಖ್ಯಅಧಿಕಾರಿ) ಕಲಾ ಕೃಷ್ಣಮೂರ್ತಿ, ಕೆಎಸ್‌ಆರ್‌ಪಿ 9ನೇ ಬೆಟಾಲಿಯನ್‌ನ ಕಮಾಂಡರ್ ಡಾ. ರಾಮಕೃಷ್ಣ ಮುದ್ದಿಪೈ, ಗುಪ್ತಚರ ವಿಭಾಗದ ಎಸ್‌ಪಿ ಕಲೀಮನಿ ಮಹದೇವಪ್ಪ ಶಾಂತರಾಜು, ಸಿಐಡಿ ಎಸ್‌ಪಿ ಎನ್. ವೆಂಕಟೇಶ ನಾರಾಯಣ, ಮಹದೇವಪುರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಜಿ.ಪ್ರವೀಣ್ ಬಾಬು ಗುರುಸಿದ್ದಯ್ಯ, ಕೆಜಿಹಳ್ಳಿ ಉಪ ವಿಭಾಗದ ಎಸಿಪಿ ಪ್ರಕಾಶ್ ರಾಥೋಡ್, ಬೆಸ್ಕಾಂ ಜಾಗೃತದಳ ಇನ್‌ಸ್ಪೆಕ್ಟರ್ ಎಡ್ವಿನ್ ಪ್ರದೀಪ್ ಸ್ಯಾಮ್‌ಸನ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸತೀಶ್ ಸದಾಶಿವಯ್ಯ ಬೆಟ್ಟಹಳ್ಳಿ, ನಂದಗುಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಶಾಂತರಾಮ, ಮಂಗಳೂರು ಸಿಸಿಬಿ ಎಎಸ್‌ಐ ಸುಜನ ಶೆಟ್ಟಿ, ಬೆಂಗಳೂರು ಎಸ್‌ಸಿಆರ್‌ಬಿ ಪಿಎಸ್‌ಐ ಝಾನ್ಸಿರಾಣಿ ಡಿಪಿಓ ಗದಗ ಜಿಲ್ಲೆ ಎಎಸ್‌ಐ ಗುರುರಾಜ ಮಹಾದೇವಪ್ಪ ಬುದ್ದಿಲ್, ಬೆಂಗಳೂರು ಕೆಎಸ್‌ಆರ‍್ಪಿ 4ನೇ ಬೆಟಾಲಿಯನ್ ಹೆಡ್‌ಕಾನ್‌ಸ್ಟೆಬಲ್ ಎಂ.ಜೆ. ರಾಜೇಶ್, ಕೊಪ್ಪಳ ಗಣಕಯಂತ್ರ ವಿಭಾಗ ಡಿಪಿಓ ಹೆಡ್‌ಕಾನ್‌ಸ್ಪೇಬಲ್ ಶಮ್‌ಸುದ್ದೀನ್, ಬೆಂಗಳೂರು ನಗರ ಗುಪ್ತಚರ ಹೆಡ್‌ಕಾನ್‌ಸ್ಪೆಬಲ್ ವೈ. ಶಂಕರ್, ಗುಲ್ಬರ್ಗ ನಗರ ಪೊಲೀಸ್ ಆಯುಕ್ತರ ಕಚೇರಿಯ ಹೆಡ್‌ಕಾನ್‌ಸ್ಟೆಬಲ್ ಅಲಂಕಾರ್ ರಾಕೇಶ್ ರವಿನಾ ಸಿದ್ದಪ್ಪ, ಗುಪ್ತಚರ ವಿಭಾಗ ಸಿವಿಲ್ ಹೆಡ್‌ಕಾನ್‌ಸ್ಟೆಬಲ್ ಎಲ್. ರವಿ ಅವರಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಸೇವಾ ಪದಕ ಲಭಿಸಿದೆ.

ಆಂದೋಲನ ಡೆಸ್ಕ್

Recent Posts

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

8 mins ago

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…

11 mins ago

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

58 mins ago

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

1 hour ago

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

2 hours ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

2 hours ago