ರಾಜ್ಯ

18 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು : ಗಣನೀಯ ಸೇವೆ ಸಲ್ಲಿಸಿದ 18 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕ ಲಭಿಸಿದೆ. ಲೋಕಾಯುಕ್ತ ಬೆಂಗಳೂರು ಕೇಂದ್ರದಲ್ಲಿ ಎಸ್‌ಪಿಯಾಗಿರುವ ಎಸ್. ಬದ್ರಿನಾಥ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಲಭಿಸಿದೆ. ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ರಾಷ್ಟ್ರಪತಿಗಳಿಂದ ಪ್ರಶಂಸೆ ವ್ಯಕ್ತಪಡಿಸಿ ವಿಶಿಷ್ಟ ಸೇವಾ ಪದಕವನ್ನು ನೀಡಲಾಗುತ್ತಿದೆ.

ರಾಜ್ಯ ಗುಪ್ತಚರ ಐಜಿಪಿ ಡಾ. ಚಂದ್ರಗುಪ್ತ, ಎಐಜಿಪಿ (ಅಪರಾಧ ಮುಖ್ಯಅಧಿಕಾರಿ) ಕಲಾ ಕೃಷ್ಣಮೂರ್ತಿ, ಕೆಎಸ್‌ಆರ್‌ಪಿ 9ನೇ ಬೆಟಾಲಿಯನ್‌ನ ಕಮಾಂಡರ್ ಡಾ. ರಾಮಕೃಷ್ಣ ಮುದ್ದಿಪೈ, ಗುಪ್ತಚರ ವಿಭಾಗದ ಎಸ್‌ಪಿ ಕಲೀಮನಿ ಮಹದೇವಪ್ಪ ಶಾಂತರಾಜು, ಸಿಐಡಿ ಎಸ್‌ಪಿ ಎನ್. ವೆಂಕಟೇಶ ನಾರಾಯಣ, ಮಹದೇವಪುರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಜಿ.ಪ್ರವೀಣ್ ಬಾಬು ಗುರುಸಿದ್ದಯ್ಯ, ಕೆಜಿಹಳ್ಳಿ ಉಪ ವಿಭಾಗದ ಎಸಿಪಿ ಪ್ರಕಾಶ್ ರಾಥೋಡ್, ಬೆಸ್ಕಾಂ ಜಾಗೃತದಳ ಇನ್‌ಸ್ಪೆಕ್ಟರ್ ಎಡ್ವಿನ್ ಪ್ರದೀಪ್ ಸ್ಯಾಮ್‌ಸನ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸತೀಶ್ ಸದಾಶಿವಯ್ಯ ಬೆಟ್ಟಹಳ್ಳಿ, ನಂದಗುಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಶಾಂತರಾಮ, ಮಂಗಳೂರು ಸಿಸಿಬಿ ಎಎಸ್‌ಐ ಸುಜನ ಶೆಟ್ಟಿ, ಬೆಂಗಳೂರು ಎಸ್‌ಸಿಆರ್‌ಬಿ ಪಿಎಸ್‌ಐ ಝಾನ್ಸಿರಾಣಿ ಡಿಪಿಓ ಗದಗ ಜಿಲ್ಲೆ ಎಎಸ್‌ಐ ಗುರುರಾಜ ಮಹಾದೇವಪ್ಪ ಬುದ್ದಿಲ್, ಬೆಂಗಳೂರು ಕೆಎಸ್‌ಆರ‍್ಪಿ 4ನೇ ಬೆಟಾಲಿಯನ್ ಹೆಡ್‌ಕಾನ್‌ಸ್ಟೆಬಲ್ ಎಂ.ಜೆ. ರಾಜೇಶ್, ಕೊಪ್ಪಳ ಗಣಕಯಂತ್ರ ವಿಭಾಗ ಡಿಪಿಓ ಹೆಡ್‌ಕಾನ್‌ಸ್ಪೇಬಲ್ ಶಮ್‌ಸುದ್ದೀನ್, ಬೆಂಗಳೂರು ನಗರ ಗುಪ್ತಚರ ಹೆಡ್‌ಕಾನ್‌ಸ್ಪೆಬಲ್ ವೈ. ಶಂಕರ್, ಗುಲ್ಬರ್ಗ ನಗರ ಪೊಲೀಸ್ ಆಯುಕ್ತರ ಕಚೇರಿಯ ಹೆಡ್‌ಕಾನ್‌ಸ್ಟೆಬಲ್ ಅಲಂಕಾರ್ ರಾಕೇಶ್ ರವಿನಾ ಸಿದ್ದಪ್ಪ, ಗುಪ್ತಚರ ವಿಭಾಗ ಸಿವಿಲ್ ಹೆಡ್‌ಕಾನ್‌ಸ್ಟೆಬಲ್ ಎಲ್. ರವಿ ಅವರಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಸೇವಾ ಪದಕ ಲಭಿಸಿದೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

11 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

11 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

11 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

11 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

23 hours ago