ರಾಜ್ಯ

18 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು : ಗಣನೀಯ ಸೇವೆ ಸಲ್ಲಿಸಿದ 18 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕ ಲಭಿಸಿದೆ. ಲೋಕಾಯುಕ್ತ ಬೆಂಗಳೂರು ಕೇಂದ್ರದಲ್ಲಿ ಎಸ್‌ಪಿಯಾಗಿರುವ ಎಸ್. ಬದ್ರಿನಾಥ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಲಭಿಸಿದೆ. ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ರಾಷ್ಟ್ರಪತಿಗಳಿಂದ ಪ್ರಶಂಸೆ ವ್ಯಕ್ತಪಡಿಸಿ ವಿಶಿಷ್ಟ ಸೇವಾ ಪದಕವನ್ನು ನೀಡಲಾಗುತ್ತಿದೆ.

ರಾಜ್ಯ ಗುಪ್ತಚರ ಐಜಿಪಿ ಡಾ. ಚಂದ್ರಗುಪ್ತ, ಎಐಜಿಪಿ (ಅಪರಾಧ ಮುಖ್ಯಅಧಿಕಾರಿ) ಕಲಾ ಕೃಷ್ಣಮೂರ್ತಿ, ಕೆಎಸ್‌ಆರ್‌ಪಿ 9ನೇ ಬೆಟಾಲಿಯನ್‌ನ ಕಮಾಂಡರ್ ಡಾ. ರಾಮಕೃಷ್ಣ ಮುದ್ದಿಪೈ, ಗುಪ್ತಚರ ವಿಭಾಗದ ಎಸ್‌ಪಿ ಕಲೀಮನಿ ಮಹದೇವಪ್ಪ ಶಾಂತರಾಜು, ಸಿಐಡಿ ಎಸ್‌ಪಿ ಎನ್. ವೆಂಕಟೇಶ ನಾರಾಯಣ, ಮಹದೇವಪುರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಜಿ.ಪ್ರವೀಣ್ ಬಾಬು ಗುರುಸಿದ್ದಯ್ಯ, ಕೆಜಿಹಳ್ಳಿ ಉಪ ವಿಭಾಗದ ಎಸಿಪಿ ಪ್ರಕಾಶ್ ರಾಥೋಡ್, ಬೆಸ್ಕಾಂ ಜಾಗೃತದಳ ಇನ್‌ಸ್ಪೆಕ್ಟರ್ ಎಡ್ವಿನ್ ಪ್ರದೀಪ್ ಸ್ಯಾಮ್‌ಸನ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸತೀಶ್ ಸದಾಶಿವಯ್ಯ ಬೆಟ್ಟಹಳ್ಳಿ, ನಂದಗುಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಶಾಂತರಾಮ, ಮಂಗಳೂರು ಸಿಸಿಬಿ ಎಎಸ್‌ಐ ಸುಜನ ಶೆಟ್ಟಿ, ಬೆಂಗಳೂರು ಎಸ್‌ಸಿಆರ್‌ಬಿ ಪಿಎಸ್‌ಐ ಝಾನ್ಸಿರಾಣಿ ಡಿಪಿಓ ಗದಗ ಜಿಲ್ಲೆ ಎಎಸ್‌ಐ ಗುರುರಾಜ ಮಹಾದೇವಪ್ಪ ಬುದ್ದಿಲ್, ಬೆಂಗಳೂರು ಕೆಎಸ್‌ಆರ‍್ಪಿ 4ನೇ ಬೆಟಾಲಿಯನ್ ಹೆಡ್‌ಕಾನ್‌ಸ್ಟೆಬಲ್ ಎಂ.ಜೆ. ರಾಜೇಶ್, ಕೊಪ್ಪಳ ಗಣಕಯಂತ್ರ ವಿಭಾಗ ಡಿಪಿಓ ಹೆಡ್‌ಕಾನ್‌ಸ್ಪೇಬಲ್ ಶಮ್‌ಸುದ್ದೀನ್, ಬೆಂಗಳೂರು ನಗರ ಗುಪ್ತಚರ ಹೆಡ್‌ಕಾನ್‌ಸ್ಪೆಬಲ್ ವೈ. ಶಂಕರ್, ಗುಲ್ಬರ್ಗ ನಗರ ಪೊಲೀಸ್ ಆಯುಕ್ತರ ಕಚೇರಿಯ ಹೆಡ್‌ಕಾನ್‌ಸ್ಟೆಬಲ್ ಅಲಂಕಾರ್ ರಾಕೇಶ್ ರವಿನಾ ಸಿದ್ದಪ್ಪ, ಗುಪ್ತಚರ ವಿಭಾಗ ಸಿವಿಲ್ ಹೆಡ್‌ಕಾನ್‌ಸ್ಟೆಬಲ್ ಎಲ್. ರವಿ ಅವರಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಸೇವಾ ಪದಕ ಲಭಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

1 hour ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

1 hour ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

4 hours ago