ರಾಜ್ಯ

18 ಸಾವಿರ ಶಿಕ್ಷಕರ ನೇಮಕ ಶೀಘ್ರ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಲಬುರಗಿ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್‌‍ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 5 ಸಾವಿರ ದ್ವಿಭಾಷಾ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.

1 ಸಾವಿರವಿದ್ದ ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು 4 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೂ ಅನುಮೋದನೆ ನೀಡಲಾಗಿದೆ. 6 ದಿನಗಳ ಕಾಲ ಮಕ್ಕಳ ಭೌತಿಕತೆ ಹೆಚ್ಚಲು ಮೊಟ್ಟೆ ಇಲ್ಲವೇ ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲೆಗಳ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಂವಿಧಾನ ಪೀಠಿಕೆಯನ್ನು ಶಿಕ್ಷಣ ಸಚಿವರು ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳಿಗೆ ಶುಭ ಕೋರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago