ರಾಜ್ಯ

ಪೋಷಕರಿಗೆ ಗುಡ್‌ನ್ಯೂಸ್:‌ 1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಸಡಿಲ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಪೋಷಕರಿಗೆ ಗುಡ್‌ನ್ಯೂಸ್‌ ನೀಡಿದೆ. 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ.

ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಶಾಲಾ ಮಕ್ಕಳ ವಯೋಮಿತಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

1ನೇ ತರಗತಿಗೆ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. 1ನೇ ತರಗತಿಗೆ 6 ವರ್ಷ ಕಡ್ಡಾಯ ನಿಯಮದಿಂದ ವಾರ್ಷಿಕವಾಗಿ 5 ಲಕ್ಷ ಮಂದಿ ಮಕ್ಕಳಿಗೆ ಶಾಲಾ ದಾಖಲಾತಿ ಮಾಡುವ ವೇಳೆ ಸಮಸ್ಯೆ ಆಗುತ್ತಿತ್ತು.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ 5 ವರ್ಷ 5 ತಿಂಗಳು ಆಗಿರುವ ಮಕ್ಕಳಿಗೂ 1ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ಪೋಷಕರಿಗೆ ಶಿಕ್ಷಣ ಇಲಾಖೆಯು ಗುಡ್‌ನ್ಯೂಸ್‌ ನೀಡಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ದೇಶದಲ್ಲಿ ಎಲ್ಲಾ ಕಡೆ ಕೂಡ 6 ವರ್ಷ ಕಡ್ಡಾಯ ಮಾಡಲಾಗಿದೆ. ಈ ವರ್ಷಕ್ಕೆ ಮಾತ್ರ ವಯಸ್ಸು ಸಡಿಲಿಕೆ ಮಾಡಿದ್ದೇವೆ. ಈ ವರ್ಷಕ್ಕೆ ಮಾತ್ರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

3 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

3 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

3 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

4 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

4 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

4 hours ago