ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಪೋಷಕರಿಗೆ ಗುಡ್ನ್ಯೂಸ್ ನೀಡಿದೆ. 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ.
ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಶಾಲಾ ಮಕ್ಕಳ ವಯೋಮಿತಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
1ನೇ ತರಗತಿಗೆ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. 1ನೇ ತರಗತಿಗೆ 6 ವರ್ಷ ಕಡ್ಡಾಯ ನಿಯಮದಿಂದ ವಾರ್ಷಿಕವಾಗಿ 5 ಲಕ್ಷ ಮಂದಿ ಮಕ್ಕಳಿಗೆ ಶಾಲಾ ದಾಖಲಾತಿ ಮಾಡುವ ವೇಳೆ ಸಮಸ್ಯೆ ಆಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ 5 ವರ್ಷ 5 ತಿಂಗಳು ಆಗಿರುವ ಮಕ್ಕಳಿಗೂ 1ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ಪೋಷಕರಿಗೆ ಶಿಕ್ಷಣ ಇಲಾಖೆಯು ಗುಡ್ನ್ಯೂಸ್ ನೀಡಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ದೇಶದಲ್ಲಿ ಎಲ್ಲಾ ಕಡೆ ಕೂಡ 6 ವರ್ಷ ಕಡ್ಡಾಯ ಮಾಡಲಾಗಿದೆ. ಈ ವರ್ಷಕ್ಕೆ ಮಾತ್ರ ವಯಸ್ಸು ಸಡಿಲಿಕೆ ಮಾಡಿದ್ದೇವೆ. ಈ ವರ್ಷಕ್ಕೆ ಮಾತ್ರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…