ರಾಜ್ಯ

ಹೊಸ ಪಡಿತರ ಚೀಟಿಗೆ 2.95 ಲಕ್ಷ ಅರ್ಜಿ ಬಂದಿದೆ: ಸಚಿವ ಕೆ.ಎಚ್‌. ಮುನಿಯಪ್ಪ

ಹುಬ್ಬಳ್ಳಿ : ಹೊಸ ಪಡಿತರ ಚೀಟಿ ಕೋರಿ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳನ್ನು ಪರಿಶೀಲಿಸಿ, ಶೀಘ್ರದಲ್ಲೇ ವಿತರಿಸಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆಗಳ ಸಚಿವ ಕೆ.ಎಚ್‌. ಮುನಿಯಪ್ಪ ಅವರು ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಹೊಸ ಪಡಿತರ ಚೀಟಿ ವಿತರಣೆಯನ್ನು ನಿಲ್ಲಿಸಿತ್ತು. ಅದನ್ನು ಪುನರಾರಂಭಿಸುತ್ತಿದ್ದೇವೆ. ಹೊಸ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವ ಬಹುತೇಕ ಬಿಪಿಎಲ್‌ ಕಾರ್ಡ್‌ ಕೋರಿದ್ದಾರೆ. ಇವರನ್ನು ಪರಿಶೀಲಿಸಿ, ದಾಖಲಾತಿಗಳ ಆಧಾರದ ಮೇಲೆ ಬಿಪಿಎಲ್‌, ಎಪಿಎಲ್‌ ಬೇರ್ಪಡಿಸಿ, ಕಾರ್ಡ್‌ ವಿತರಿಸಲಾಗುವುದು’ ಎಂದು ಹೇಳಿದರು.

‘ಅನರ್ಹರು ಬಿಪಿಎಲ್‌ ಕಾರ್ಡ್‌ ಪಡೆದಿದ್ದರೆ ಅಂತಹವರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇವು ಪತ್ತೆಯಾದರೆ ಅವುಗಳನ್ನು ರದ್ದುಪಡಿಸಲಾಗುವುದು. ಇದರ ಜೊತೆಗೆ, ಪಡಿತರ ಅಕ್ಕಿ ದುರುಪಯೋಗವಾದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಇಂತಹ ದೂರುಗಳು ಬಂದ ಕಡೆ ತನಿಖೆ ಮಾಡಿಸುತ್ತೇವೆ’ ಎಂದು ತಿಳಿಸಿದರು.

ಆಹಾರ ಭದ್ರತೆ ಕಾಯ್ದೆಯನ್ನು 2013ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿತ್ತು. ಅದನ್ನು ಈಗಿನ ಬಿಜೆಪಿ ಸರ್ಕಾರ ಮುಂದುವರಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ನಾವು 10 ಕೆ.ಜಿ. ಅಕ್ಕಿ ಕೊಡಲು ಹೆಚ್ಚುವರಿ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಿದರೆ ಅವರು ಕೊಡಲಿಲ್ಲ. ಬಡವರಿಗೆ ನೀಡುವ ಅಕ್ಕಿ ವಿಷಯದಲ್ಲಿ ಅವರು ರಾಜಕೀಯ ಬೆರೆಸಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಅಕ್ಕಿ ಕೊಡುವಂತೆ ನಾವು ಮಾಡಿಕೊಂಡ ಮನವಿಗೆ ಕೇಂದ್ರ ಸರ್ಕಾರವು ಸ್ಪಂದಿಸುತ್ತಿಲ್ಲ. ಹೀಗಾಗಿ ಅಕ್ಕಿ ಬೆಳೆಯುವ ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಗಢ ರಾಜ್ಯಗಳಿಂದ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ನಮಗೆ ಬೇಕಾಗುವಷ್ಟು ಪ್ರಮಾಣದಲ್ಲಿ ಅಕ್ಕಿ ಸಿಕ್ಕ ತಕ್ಷಣ ಹಣ ಕೊಡುವುದನ್ನು ನಿಲ್ಲಿಸಿ, ಅಕ್ಕಿ ಕೊಡುತ್ತೇವೆ ಎಂದು ತಿಳಿಸಿದರು.

10 ಕೆ.ಜಿ ಅಕ್ಕಿಯ ಕಮಿಷನ್‌ ತಮಗೆ ನೀಡಬೇಕೆನ್ನುವ ಪಡಿತರ ವಿತರಕರ ಬೇಡಿಕೆ ಕುರಿತು ಪ್ರತಿಕ್ರಿಯಿಸಿ, ‘ಪಡಿತರ ವಿತರಕರಿಗೆ ಈಗಾಗಲೇ 5 ಕೆ.ಜಿ. ಅಕ್ಕಿಯ ಕಮಿಷನ್‌ ಸಿಗುತ್ತಿದೆ. ಇನ್ನುಳಿದ 5 ಕೆ.ಜಿ ಅಕ್ಕಿಯ ಬದಲಾಗಿ ಹಣವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೀಡುತ್ತಿದ್ದೇವೆ. ವಿತರಕರ ಬೇಡಿಕೆ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆಂದು ಹೇಳಿದರು.

andolanait

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

41 mins ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

42 mins ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

44 mins ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

46 mins ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

52 mins ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

58 mins ago