ರಾಜ್ಯ

ಹೊಸ ಪಡಿತರ ಚೀಟಿಗೆ 2.95 ಲಕ್ಷ ಅರ್ಜಿ ಬಂದಿದೆ: ಸಚಿವ ಕೆ.ಎಚ್‌. ಮುನಿಯಪ್ಪ

ಹುಬ್ಬಳ್ಳಿ : ಹೊಸ ಪಡಿತರ ಚೀಟಿ ಕೋರಿ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳನ್ನು ಪರಿಶೀಲಿಸಿ, ಶೀಘ್ರದಲ್ಲೇ ವಿತರಿಸಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆಗಳ ಸಚಿವ ಕೆ.ಎಚ್‌. ಮುನಿಯಪ್ಪ ಅವರು ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಹೊಸ ಪಡಿತರ ಚೀಟಿ ವಿತರಣೆಯನ್ನು ನಿಲ್ಲಿಸಿತ್ತು. ಅದನ್ನು ಪುನರಾರಂಭಿಸುತ್ತಿದ್ದೇವೆ. ಹೊಸ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವ ಬಹುತೇಕ ಬಿಪಿಎಲ್‌ ಕಾರ್ಡ್‌ ಕೋರಿದ್ದಾರೆ. ಇವರನ್ನು ಪರಿಶೀಲಿಸಿ, ದಾಖಲಾತಿಗಳ ಆಧಾರದ ಮೇಲೆ ಬಿಪಿಎಲ್‌, ಎಪಿಎಲ್‌ ಬೇರ್ಪಡಿಸಿ, ಕಾರ್ಡ್‌ ವಿತರಿಸಲಾಗುವುದು’ ಎಂದು ಹೇಳಿದರು.

‘ಅನರ್ಹರು ಬಿಪಿಎಲ್‌ ಕಾರ್ಡ್‌ ಪಡೆದಿದ್ದರೆ ಅಂತಹವರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇವು ಪತ್ತೆಯಾದರೆ ಅವುಗಳನ್ನು ರದ್ದುಪಡಿಸಲಾಗುವುದು. ಇದರ ಜೊತೆಗೆ, ಪಡಿತರ ಅಕ್ಕಿ ದುರುಪಯೋಗವಾದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಇಂತಹ ದೂರುಗಳು ಬಂದ ಕಡೆ ತನಿಖೆ ಮಾಡಿಸುತ್ತೇವೆ’ ಎಂದು ತಿಳಿಸಿದರು.

ಆಹಾರ ಭದ್ರತೆ ಕಾಯ್ದೆಯನ್ನು 2013ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿತ್ತು. ಅದನ್ನು ಈಗಿನ ಬಿಜೆಪಿ ಸರ್ಕಾರ ಮುಂದುವರಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ನಾವು 10 ಕೆ.ಜಿ. ಅಕ್ಕಿ ಕೊಡಲು ಹೆಚ್ಚುವರಿ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಿದರೆ ಅವರು ಕೊಡಲಿಲ್ಲ. ಬಡವರಿಗೆ ನೀಡುವ ಅಕ್ಕಿ ವಿಷಯದಲ್ಲಿ ಅವರು ರಾಜಕೀಯ ಬೆರೆಸಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಅಕ್ಕಿ ಕೊಡುವಂತೆ ನಾವು ಮಾಡಿಕೊಂಡ ಮನವಿಗೆ ಕೇಂದ್ರ ಸರ್ಕಾರವು ಸ್ಪಂದಿಸುತ್ತಿಲ್ಲ. ಹೀಗಾಗಿ ಅಕ್ಕಿ ಬೆಳೆಯುವ ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಗಢ ರಾಜ್ಯಗಳಿಂದ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ನಮಗೆ ಬೇಕಾಗುವಷ್ಟು ಪ್ರಮಾಣದಲ್ಲಿ ಅಕ್ಕಿ ಸಿಕ್ಕ ತಕ್ಷಣ ಹಣ ಕೊಡುವುದನ್ನು ನಿಲ್ಲಿಸಿ, ಅಕ್ಕಿ ಕೊಡುತ್ತೇವೆ ಎಂದು ತಿಳಿಸಿದರು.

10 ಕೆ.ಜಿ ಅಕ್ಕಿಯ ಕಮಿಷನ್‌ ತಮಗೆ ನೀಡಬೇಕೆನ್ನುವ ಪಡಿತರ ವಿತರಕರ ಬೇಡಿಕೆ ಕುರಿತು ಪ್ರತಿಕ್ರಿಯಿಸಿ, ‘ಪಡಿತರ ವಿತರಕರಿಗೆ ಈಗಾಗಲೇ 5 ಕೆ.ಜಿ. ಅಕ್ಕಿಯ ಕಮಿಷನ್‌ ಸಿಗುತ್ತಿದೆ. ಇನ್ನುಳಿದ 5 ಕೆ.ಜಿ ಅಕ್ಕಿಯ ಬದಲಾಗಿ ಹಣವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೀಡುತ್ತಿದ್ದೇವೆ. ವಿತರಕರ ಬೇಡಿಕೆ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆಂದು ಹೇಳಿದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

49 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

1 hour ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago