ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್ ಪುತ್ರ ಅಜಯ್ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಈಗ ಪ್ರಕರಣ ವಾಪಸ್ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ರಾಜಿ ಸಂಧಾನ ಸಕ್ಸಸ್ ಆಗಿದ್ದು, ಯಶವಂತಪುರ ನಿವಾಸಿ ಸುನೀತಾ ಎಂಬುವವರು ಪ್ರಕರಣವನ್ನು ಹಿಂಪಡೆದಿದ್ದಾರೆ ಎನ್ನಲಾಗುತ್ತಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು. ಅಲ್ಲದೇ ಪೊಲೀಸರು ಮತ್ತೋರ್ವ ಆರೋಪಿ ಗೋಪಾಲ್ಗಾಗಿ ಶೋಧ ನಡೆಸುತ್ತಿದ್ದರು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದರು.
ಇದೆಲ್ಲಾ ಬೆಳವಣಿಗೆಗಳ ನಡುವೆ ಸುನೀತಾ ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆ ಬಗೆಹರಿದಿದ್ದರಿಂದ ಯಾರನ್ನೂ ಬಂಧಿಸಲಾಗಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತುಂಬಾ ಒಳ್ಳೆಯ ಮನುಷ್ಯ. ಅವರ ಬಗ್ಗೆ ನನಗೆ ಯಾವುದೇ ದೂರುಗಳಿಲ್ಲ. ಈಗ ಪ್ರಕರಣ ಬಗೆಹರಿದಿದೆ. ಹೀಗಾಗಿ ಪ್ರಕರಣ ವಾಪಸ್ ಪಡೆಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…