ರಾಜ್ಯ

ಡಿಕೆಶಿ ಸೇರಿ 2 ಡಜನ್‌ ಜನರು ಸಿಎಂ ಆಗಲು ಅರ್ಹರಿದ್ದಾರೆ!: ಸಚಿವ ರಾಜಣ್ಣ

ಹಾಸನ : ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಇದೆ. ಹಾಗೆಯೇ ಕಾಂಗ್ರೆಸ್ ಪಕ್ಷದ ಇನ್ನು ಎರಡು ಡಝನ್ ಜನ (24 ಮಂದಿ) ಈ ರೀತಿ ಅರ್ಹತೆ ಇರುವವರಿದ್ದಾರೆ. ಆದರೆ ನಮ್ಮ‌ ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎನ್ನೋದು ಬಹುಜನರ ಬಯಕೆಯಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಕಾಂಗ್ರೆಸ್‌ನಲ್ಲಿ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಹಾಸನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂದು ಕೆಲವು ಕಾಂಗ್ರೆಸ್ ಶಾಸಕರು ಅಭಿಪ್ರಾಯ ಹೇಳಿರಬಹುದು ಅದರಲ್ಲಿ ತಪ್ಪೇನಿದೆ. ಲೋಕೋ ವಿಭಿನ್ನ ರುಚಿಃ ಎನ್ನುವ ಹಾಗೆ ಅವರ ಅಭಿಪ್ರಾಯವೂ ಇದೆ.ಒಬ್ಬೊಬ್ಬರಿಗೆ ಒಂದರಲ್ಲಿ ಆಸಕ್ತಿ ಇರುತ್ತದೆ. ಡಿ.ಕೆ. ಶಿವಕುಮಾರ್ ಕೂಡ ಅರ್ಹರಿದಾರೆ, ಉತ್ರಮ ಸಂಘಟಕರು ಅವರು. ಪಕ್ಷದಲ್ಲಿ ಅವರು ಮೊದಲಿನಿಂದಲೂ ನಿಷ್ಟಾವಂತರಿದಾರೆ. ಹಾಗಾಗಿ ಅವರು ಮುಖ್ಯಮಂತ್ರಿ ಆಗೋ ಅರ್ಹತೆ ಹೊಂದಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಎರಡು ಡಝನ್ (24 ಮಂದಿ) ಜನ ಈ ರೀತಿ ಮುಖ್ಯಮಂತ್ರಿ ಆಗು ಅರ್ಹತೆ ಇರುವವರು ಇದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಎಂದರೆ ಸಂತೋಷ ಪಡೋರಲ್ಲಿ ನಾವೂ ಒಬ್ಬರು. ಆದರೆ ನಮ್ಮ‌ ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎನ್ನೋದು ಬಹುಜನರ ಬಯಕೆಯಾಗಿದೆ. ಆ ಬಯಕೆ ನಾವು ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಬಹುತೇಕ ಶಾಸಕರ ಬಯಕೆಯೂ ಅದೇ ಆಗಿದೆ ಎಂದು ಹೇಳಿದರು.

ಶಾಸಕರ ಬಯಕೆ ಏನೆ ಇದ್ದರೂ ಎಲ್ಲಾ ಶಾಸಕರು ಹೈ ಕಮಾಂಡ್ ನಿರ್ಧಾರಕ್ಕೆ ಬದ್ದರಾಗಿರುವವರೇ ಇದ್ದಾರೆ. ಹೈ ಕಮಾಂಡ್ ನಿರ್ಧಾರ ಎನ್ನುತ್ತಲೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎಂದು ಸಚಿವ ರಾಜಣ್ಣ ತಮ್ಮ ಇಂಗಿತ ವ್ಯಕ್ತಪಡಿಸಿದರು. ಎರಡು ವರ್ಷ ಆದ ಬಳಿಕ ನಾಯಕತ್ವ ಬದಲಾವಣೆ ವಿಚಾರದ ಕುರಿತು ಮಾತನಾಡಿ, ಅಯ್ಯೋ ಅಲ್ಲಿವರೆಗೆ ನೋಡೋಣ ಬಿಡಿ. ಆಗ ಯಾರಿರ್ತಾರೊ ಬದುಕೋರು ಯಾರು ಸಾಯೋರು ಯಾರು? ಅದಕ್ಕೆ ಯಾಕೆ ತಲೆ ಕೆಡಿಸಿಕೊಳ್ತಿರಾ ಎಂದು ಹೇಳಿದರು.

andolanait

Recent Posts

ಮಹದೇಶ್ವರ ಬೆಟ್ಟ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

11 mins ago

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…

13 mins ago

ದೊಡ್ಡಕೆರೆ, ಲಿಂಗಾಂಬುಧಿ ಕೆರೆ ಪುನರುಜ್ಜೀವನಗೊಳಿಸಿ : ಪರಿಸರ ಸಂರಕ್ಷಣಾ ವೇದಿಕೆ ಒತ್ತಾಯ

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…

24 mins ago

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

1 hour ago

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

1 hour ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

2 hours ago