ರಾಜ್ಯ

ಡಿಕೆಶಿ ಸೇರಿ 2 ಡಜನ್‌ ಜನರು ಸಿಎಂ ಆಗಲು ಅರ್ಹರಿದ್ದಾರೆ!: ಸಚಿವ ರಾಜಣ್ಣ

ಹಾಸನ : ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಇದೆ. ಹಾಗೆಯೇ ಕಾಂಗ್ರೆಸ್ ಪಕ್ಷದ ಇನ್ನು ಎರಡು ಡಝನ್ ಜನ (24 ಮಂದಿ) ಈ ರೀತಿ ಅರ್ಹತೆ ಇರುವವರಿದ್ದಾರೆ. ಆದರೆ ನಮ್ಮ‌ ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎನ್ನೋದು ಬಹುಜನರ ಬಯಕೆಯಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಕಾಂಗ್ರೆಸ್‌ನಲ್ಲಿ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಹಾಸನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂದು ಕೆಲವು ಕಾಂಗ್ರೆಸ್ ಶಾಸಕರು ಅಭಿಪ್ರಾಯ ಹೇಳಿರಬಹುದು ಅದರಲ್ಲಿ ತಪ್ಪೇನಿದೆ. ಲೋಕೋ ವಿಭಿನ್ನ ರುಚಿಃ ಎನ್ನುವ ಹಾಗೆ ಅವರ ಅಭಿಪ್ರಾಯವೂ ಇದೆ.ಒಬ್ಬೊಬ್ಬರಿಗೆ ಒಂದರಲ್ಲಿ ಆಸಕ್ತಿ ಇರುತ್ತದೆ. ಡಿ.ಕೆ. ಶಿವಕುಮಾರ್ ಕೂಡ ಅರ್ಹರಿದಾರೆ, ಉತ್ರಮ ಸಂಘಟಕರು ಅವರು. ಪಕ್ಷದಲ್ಲಿ ಅವರು ಮೊದಲಿನಿಂದಲೂ ನಿಷ್ಟಾವಂತರಿದಾರೆ. ಹಾಗಾಗಿ ಅವರು ಮುಖ್ಯಮಂತ್ರಿ ಆಗೋ ಅರ್ಹತೆ ಹೊಂದಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಎರಡು ಡಝನ್ (24 ಮಂದಿ) ಜನ ಈ ರೀತಿ ಮುಖ್ಯಮಂತ್ರಿ ಆಗು ಅರ್ಹತೆ ಇರುವವರು ಇದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಎಂದರೆ ಸಂತೋಷ ಪಡೋರಲ್ಲಿ ನಾವೂ ಒಬ್ಬರು. ಆದರೆ ನಮ್ಮ‌ ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎನ್ನೋದು ಬಹುಜನರ ಬಯಕೆಯಾಗಿದೆ. ಆ ಬಯಕೆ ನಾವು ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಬಹುತೇಕ ಶಾಸಕರ ಬಯಕೆಯೂ ಅದೇ ಆಗಿದೆ ಎಂದು ಹೇಳಿದರು.

ಶಾಸಕರ ಬಯಕೆ ಏನೆ ಇದ್ದರೂ ಎಲ್ಲಾ ಶಾಸಕರು ಹೈ ಕಮಾಂಡ್ ನಿರ್ಧಾರಕ್ಕೆ ಬದ್ದರಾಗಿರುವವರೇ ಇದ್ದಾರೆ. ಹೈ ಕಮಾಂಡ್ ನಿರ್ಧಾರ ಎನ್ನುತ್ತಲೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎಂದು ಸಚಿವ ರಾಜಣ್ಣ ತಮ್ಮ ಇಂಗಿತ ವ್ಯಕ್ತಪಡಿಸಿದರು. ಎರಡು ವರ್ಷ ಆದ ಬಳಿಕ ನಾಯಕತ್ವ ಬದಲಾವಣೆ ವಿಚಾರದ ಕುರಿತು ಮಾತನಾಡಿ, ಅಯ್ಯೋ ಅಲ್ಲಿವರೆಗೆ ನೋಡೋಣ ಬಿಡಿ. ಆಗ ಯಾರಿರ್ತಾರೊ ಬದುಕೋರು ಯಾರು ಸಾಯೋರು ಯಾರು? ಅದಕ್ಕೆ ಯಾಕೆ ತಲೆ ಕೆಡಿಸಿಕೊಳ್ತಿರಾ ಎಂದು ಹೇಳಿದರು.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago