ರಾಜ್ಯ

ಡಿಕೆಶಿ ಸೇರಿ 2 ಡಜನ್‌ ಜನರು ಸಿಎಂ ಆಗಲು ಅರ್ಹರಿದ್ದಾರೆ!: ಸಚಿವ ರಾಜಣ್ಣ

ಹಾಸನ : ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಇದೆ. ಹಾಗೆಯೇ ಕಾಂಗ್ರೆಸ್ ಪಕ್ಷದ ಇನ್ನು ಎರಡು ಡಝನ್ ಜನ (24 ಮಂದಿ) ಈ ರೀತಿ ಅರ್ಹತೆ ಇರುವವರಿದ್ದಾರೆ. ಆದರೆ ನಮ್ಮ‌ ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎನ್ನೋದು ಬಹುಜನರ ಬಯಕೆಯಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಕಾಂಗ್ರೆಸ್‌ನಲ್ಲಿ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಹಾಸನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂದು ಕೆಲವು ಕಾಂಗ್ರೆಸ್ ಶಾಸಕರು ಅಭಿಪ್ರಾಯ ಹೇಳಿರಬಹುದು ಅದರಲ್ಲಿ ತಪ್ಪೇನಿದೆ. ಲೋಕೋ ವಿಭಿನ್ನ ರುಚಿಃ ಎನ್ನುವ ಹಾಗೆ ಅವರ ಅಭಿಪ್ರಾಯವೂ ಇದೆ.ಒಬ್ಬೊಬ್ಬರಿಗೆ ಒಂದರಲ್ಲಿ ಆಸಕ್ತಿ ಇರುತ್ತದೆ. ಡಿ.ಕೆ. ಶಿವಕುಮಾರ್ ಕೂಡ ಅರ್ಹರಿದಾರೆ, ಉತ್ರಮ ಸಂಘಟಕರು ಅವರು. ಪಕ್ಷದಲ್ಲಿ ಅವರು ಮೊದಲಿನಿಂದಲೂ ನಿಷ್ಟಾವಂತರಿದಾರೆ. ಹಾಗಾಗಿ ಅವರು ಮುಖ್ಯಮಂತ್ರಿ ಆಗೋ ಅರ್ಹತೆ ಹೊಂದಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಎರಡು ಡಝನ್ (24 ಮಂದಿ) ಜನ ಈ ರೀತಿ ಮುಖ್ಯಮಂತ್ರಿ ಆಗು ಅರ್ಹತೆ ಇರುವವರು ಇದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಎಂದರೆ ಸಂತೋಷ ಪಡೋರಲ್ಲಿ ನಾವೂ ಒಬ್ಬರು. ಆದರೆ ನಮ್ಮ‌ ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎನ್ನೋದು ಬಹುಜನರ ಬಯಕೆಯಾಗಿದೆ. ಆ ಬಯಕೆ ನಾವು ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಬಹುತೇಕ ಶಾಸಕರ ಬಯಕೆಯೂ ಅದೇ ಆಗಿದೆ ಎಂದು ಹೇಳಿದರು.

ಶಾಸಕರ ಬಯಕೆ ಏನೆ ಇದ್ದರೂ ಎಲ್ಲಾ ಶಾಸಕರು ಹೈ ಕಮಾಂಡ್ ನಿರ್ಧಾರಕ್ಕೆ ಬದ್ದರಾಗಿರುವವರೇ ಇದ್ದಾರೆ. ಹೈ ಕಮಾಂಡ್ ನಿರ್ಧಾರ ಎನ್ನುತ್ತಲೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು ಎಂದು ಸಚಿವ ರಾಜಣ್ಣ ತಮ್ಮ ಇಂಗಿತ ವ್ಯಕ್ತಪಡಿಸಿದರು. ಎರಡು ವರ್ಷ ಆದ ಬಳಿಕ ನಾಯಕತ್ವ ಬದಲಾವಣೆ ವಿಚಾರದ ಕುರಿತು ಮಾತನಾಡಿ, ಅಯ್ಯೋ ಅಲ್ಲಿವರೆಗೆ ನೋಡೋಣ ಬಿಡಿ. ಆಗ ಯಾರಿರ್ತಾರೊ ಬದುಕೋರು ಯಾರು ಸಾಯೋರು ಯಾರು? ಅದಕ್ಕೆ ಯಾಕೆ ತಲೆ ಕೆಡಿಸಿಕೊಳ್ತಿರಾ ಎಂದು ಹೇಳಿದರು.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

7 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

11 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

11 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

12 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

16 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

16 hours ago