ರಾಜ್ಯ

ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದ ಕಾಂಗ್ರೆಸ್‌ ನಾಯಕಿ ವಿರುದ್ಧ ದೂರು ದಾಖಲು

ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ ಪ್ರಕರಣದಡಿಯಲ್ಲಿ ಕಾಂಗ್ರೆಸ್‌ ಯುವ ನಾಯಕಿ ಸಂದ್ಯಾ ಪವಿತ್ರ ನಾಗರಾಜ್‌ ವಿರುದ್ಧ ದೂರು ದಾಖಲಾಗಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿರುವ ಸಂದ್ಯಾ ಪವಿತ್ರ ನಾಗರಾಜ್‌ ಕಾಂಗ್ರೆಸ್‌ನ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸೇರಿದಂತೆ ಇನ್ನೂ ಹಲವು ಪ್ರಮುಖ ನಾಯಕರ ಜತೆ ಫೋಟೊ ತೆಗೆಸಿಕೊಂಡಿದ್ದು, ಇದನ್ನು ಕಂಡ ಹಲವರು ಕೆಲಸ ಕೊಡಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಸಂದ್ಯಾಗೆ ಸಂದೇಶ ಕಳುಹಿಸುತ್ತಿದ್ದರು. ಇದನ್ನೇ ಬಳಸಿಕೊಂಡ ಸಂದ್ಯಾ ಕೇಳಿದಷ್ಟು ಹಣ ಕೊಟ್ಟರೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ದೂರಲಾಗಿದೆ.

ಸಂದ್ಯಾ ಪವಿತ್ರ ನಾಗರಾಜ್‌ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಮಾರುತಿ ನಗರದ ನಿವಾಸಿ ವೀಣಾ ಎಂಬುವವರಿಗೆ ಫೇಸ್‌ಬುಕ್‌ ಮೂಲಕ ಪರಿಚಯವಾದ ಸಂದ್ಯಾ ವೀಣಾ ಕೆಲಸ ಹುಡುಕುತ್ತಿರುವುದನ್ನು ತಿಳಿದ ಬಳಿಕ ಎಂಎಸ್‌ ಬಿಲ್ಡಿಂಗ್‌ನಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ 20 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು. ಆದರೆ ಈಗ ಸಂದ್ಯಾ ಕೆಲಸವನ್ನೂ ಕೊಡಿಸದೇ, ಹಣವನ್ನೂ ಸಹ ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ವೀಣಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಮತ್ತೊಂದು ಪ್ರಕರಣದಲ್ಲಿ ಸಂದ್ಯಾ ವಿರುದ್ಧ 14.70 ಲಕ್ಷ ವಂಚನೆ ಆರೋಪ ಕೇಳಿಬಂದಿದೆ. 2021ರಲ್ಲಿ ಬಾರ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ರಂಗಸ್ವಾಮಿ ಎಂಬುವವರಿಗೆ ಭಾನುಪ್ರಕಾಶ್‌ ಎಂಬುವವರ ಪರಿಚಯವಾಗಿತ್ತು. ಭಾನುಪ್ರಕಾಶ್‌ ಮೂಲಕ ಹರೀಶ್‌ ಎಂಬ ವ್ಯಕ್ತಿಯ ಪರಿಚಯ ರಂಗಸ್ವಾಮಿಗೆ ಆಗಿತ್ತು. ಹೀಗೆ ಪರಿಚಯವಾದ ಹರೀಶ್‌ ಕೆಲಸ ಕೊಡಿಸುವುದಾಗಿ ರಂಗಸ್ವಾಮಿಯಿಂದ ಹಾಗೂ ರಂಗಸ್ವಾಮಿ ಸಹೋದರಿ ರೂಪಾ ಎಂಬುವವರಿಂದ ತಲಾ 3.5 ಲಕ್ಷ ರೂಪಾಯಿಗಳನ್ನು ಪಡೆದಿದ್ದ. ಬಳಿಕ ಕೆಲಸ ಕೊಡಿಸದ ಹರೀಶ್‌ನನ್ನು ವಿಚಾರಿಸಿದಾಗ ಹಣವನ್ನು ತಾನು ಸಂದ್ಯಾಗೆ ನೀಡಿರುವುದಾಗಿ ತಿಳಿಸಿದ್ದ. ಇದರ ಕುರಿತಾಗಿ ಸಂದ್ಯಾಳನ್ನು ಕೇಳಿದಾಗ ಮತ್ತೆ 7.70 ಲಕ್ಷ ಹಣಕ್ಕೆ ಬೇಡಿಕೆಯಿಟ್ಟ ಸಂದ್ಯಾ ರೂಪಾಳಿಂದಲೇ ಒಟ್ಟು 11.20 ಲಕ್ಷ ಪಡೆದಿದ್ದಾಳೆ. ಹೀಗೆ ಲಕ್ಷಾಂತರ ರೂಪಾಯಿ ಕೊಟ್ಟು ಕೆಲಸ ಸಿಗದೇ ಕೈಸುಟ್ಟುಕೊಂಡ ರೂಪಾ ಬೆಂಗಳೂರಿನ ಜಯನಗರದಲ್ಲಿ ಸಂದ್ಯಾ, ಭಾನುಪ್ರಕಾಶ್‌ ಹಾಗೂ ಹರೀಶ್‌ ವಿರುದ್ಧ ದೂರನ್ನು ದಾಖಲಿಸಿದ್ದಾರೆ.

ಇಷ್ಟು ಮಾತ್ರವಲ್ಲದೇ ಯಾದಗಿರಿಯ ಚಂದ್ರು ಎಂಬ ಯುವಕನಿಗೂ ಸಹ ಸಂದ್ಯಾ ಹಾಗೂ ತಂಡ ಕೆಲಸ ಕೊಡಿಸುವುದಾಗಿ ನಂಬಿಸಿ ಹಣದ ಮೋಸ ಮಾಡಿದ್ದು ಸದ್ಯ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಯುವಕ ಹಣವನ್ನಾದರೂ ವಾಪಸ್‌ ಕೊಡಲಿ ಎಂದು ಗೋಳಿಟ್ಟಿದ್ದಾನೆ. 

andolana

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

8 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

9 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

10 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

10 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

11 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

11 hours ago