ರಾಜ್ಯ

ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದ ಕಾಂಗ್ರೆಸ್‌ ನಾಯಕಿ ವಿರುದ್ಧ ದೂರು ದಾಖಲು

ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ ಪ್ರಕರಣದಡಿಯಲ್ಲಿ ಕಾಂಗ್ರೆಸ್‌ ಯುವ ನಾಯಕಿ ಸಂದ್ಯಾ ಪವಿತ್ರ ನಾಗರಾಜ್‌ ವಿರುದ್ಧ ದೂರು ದಾಖಲಾಗಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿರುವ ಸಂದ್ಯಾ ಪವಿತ್ರ ನಾಗರಾಜ್‌ ಕಾಂಗ್ರೆಸ್‌ನ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸೇರಿದಂತೆ ಇನ್ನೂ ಹಲವು ಪ್ರಮುಖ ನಾಯಕರ ಜತೆ ಫೋಟೊ ತೆಗೆಸಿಕೊಂಡಿದ್ದು, ಇದನ್ನು ಕಂಡ ಹಲವರು ಕೆಲಸ ಕೊಡಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಸಂದ್ಯಾಗೆ ಸಂದೇಶ ಕಳುಹಿಸುತ್ತಿದ್ದರು. ಇದನ್ನೇ ಬಳಸಿಕೊಂಡ ಸಂದ್ಯಾ ಕೇಳಿದಷ್ಟು ಹಣ ಕೊಟ್ಟರೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ದೂರಲಾಗಿದೆ.

ಸಂದ್ಯಾ ಪವಿತ್ರ ನಾಗರಾಜ್‌ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಮಾರುತಿ ನಗರದ ನಿವಾಸಿ ವೀಣಾ ಎಂಬುವವರಿಗೆ ಫೇಸ್‌ಬುಕ್‌ ಮೂಲಕ ಪರಿಚಯವಾದ ಸಂದ್ಯಾ ವೀಣಾ ಕೆಲಸ ಹುಡುಕುತ್ತಿರುವುದನ್ನು ತಿಳಿದ ಬಳಿಕ ಎಂಎಸ್‌ ಬಿಲ್ಡಿಂಗ್‌ನಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ 20 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು. ಆದರೆ ಈಗ ಸಂದ್ಯಾ ಕೆಲಸವನ್ನೂ ಕೊಡಿಸದೇ, ಹಣವನ್ನೂ ಸಹ ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ವೀಣಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಮತ್ತೊಂದು ಪ್ರಕರಣದಲ್ಲಿ ಸಂದ್ಯಾ ವಿರುದ್ಧ 14.70 ಲಕ್ಷ ವಂಚನೆ ಆರೋಪ ಕೇಳಿಬಂದಿದೆ. 2021ರಲ್ಲಿ ಬಾರ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ರಂಗಸ್ವಾಮಿ ಎಂಬುವವರಿಗೆ ಭಾನುಪ್ರಕಾಶ್‌ ಎಂಬುವವರ ಪರಿಚಯವಾಗಿತ್ತು. ಭಾನುಪ್ರಕಾಶ್‌ ಮೂಲಕ ಹರೀಶ್‌ ಎಂಬ ವ್ಯಕ್ತಿಯ ಪರಿಚಯ ರಂಗಸ್ವಾಮಿಗೆ ಆಗಿತ್ತು. ಹೀಗೆ ಪರಿಚಯವಾದ ಹರೀಶ್‌ ಕೆಲಸ ಕೊಡಿಸುವುದಾಗಿ ರಂಗಸ್ವಾಮಿಯಿಂದ ಹಾಗೂ ರಂಗಸ್ವಾಮಿ ಸಹೋದರಿ ರೂಪಾ ಎಂಬುವವರಿಂದ ತಲಾ 3.5 ಲಕ್ಷ ರೂಪಾಯಿಗಳನ್ನು ಪಡೆದಿದ್ದ. ಬಳಿಕ ಕೆಲಸ ಕೊಡಿಸದ ಹರೀಶ್‌ನನ್ನು ವಿಚಾರಿಸಿದಾಗ ಹಣವನ್ನು ತಾನು ಸಂದ್ಯಾಗೆ ನೀಡಿರುವುದಾಗಿ ತಿಳಿಸಿದ್ದ. ಇದರ ಕುರಿತಾಗಿ ಸಂದ್ಯಾಳನ್ನು ಕೇಳಿದಾಗ ಮತ್ತೆ 7.70 ಲಕ್ಷ ಹಣಕ್ಕೆ ಬೇಡಿಕೆಯಿಟ್ಟ ಸಂದ್ಯಾ ರೂಪಾಳಿಂದಲೇ ಒಟ್ಟು 11.20 ಲಕ್ಷ ಪಡೆದಿದ್ದಾಳೆ. ಹೀಗೆ ಲಕ್ಷಾಂತರ ರೂಪಾಯಿ ಕೊಟ್ಟು ಕೆಲಸ ಸಿಗದೇ ಕೈಸುಟ್ಟುಕೊಂಡ ರೂಪಾ ಬೆಂಗಳೂರಿನ ಜಯನಗರದಲ್ಲಿ ಸಂದ್ಯಾ, ಭಾನುಪ್ರಕಾಶ್‌ ಹಾಗೂ ಹರೀಶ್‌ ವಿರುದ್ಧ ದೂರನ್ನು ದಾಖಲಿಸಿದ್ದಾರೆ.

ಇಷ್ಟು ಮಾತ್ರವಲ್ಲದೇ ಯಾದಗಿರಿಯ ಚಂದ್ರು ಎಂಬ ಯುವಕನಿಗೂ ಸಹ ಸಂದ್ಯಾ ಹಾಗೂ ತಂಡ ಕೆಲಸ ಕೊಡಿಸುವುದಾಗಿ ನಂಬಿಸಿ ಹಣದ ಮೋಸ ಮಾಡಿದ್ದು ಸದ್ಯ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಯುವಕ ಹಣವನ್ನಾದರೂ ವಾಪಸ್‌ ಕೊಡಲಿ ಎಂದು ಗೋಳಿಟ್ಟಿದ್ದಾನೆ. 

andolana

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

8 hours ago