ರಾಜ್ಯ

2 ತಿಂಗಳ ಗೃಹಲಕ್ಷ್ಮೀ ಹಣ ಶೀಘ್ರದಲ್ಲೇ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ತುಮಕೂರು: ಶೀಘ್ರದಲ್ಲೇ ಸೆಪ್ಟೆಂಬರ್‌ ಹಾಗೂ ಅಕ್ಟೋಬರ್‌ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಈ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ. ನಮ್ಮ ಗೃಹಲಕ್ಷ್ಮೀಯನ್ನು ಕಾಪಿ ಮಾಡಿಕೊಂಡು ಬಿಜೆಪಿಯವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನು ಅಕ್ಕಪಡೆ ಬಗ್ಗೆ ಮಾತನಾಡಿದ ಅವರು, ಪೊಲೀಸ್‌ ಇಲಾಖೆ ಹಾಗೂ ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸುತ್ತದೆ.

ಪ್ರತಿ ಜಿಲ್ಲೆಯಲ್ಲೂ ಅದರಲ್ಲೂ ನಗರ ಕೇಂದ್ರಗಳಲ್ಲಿ 10 ಮಹಿಳೆಯರು ಇರುತ್ತಾರೆ. ಅವರ ಜೊತೆಗೆ ಇಬ್ಬರು ಮಹಿಳಾ ಪೊಲೀಸರು ಸಹ ಇರುತ್ತಾರೆ. ಶಾಲೆ, ಕಾಲೇಜುಗಳು, ಬಸ್‌ ನಿಲ್ದಾಣ ಸೇರಿದಂತೆ ಜನಸಂದಣಿ ಪ್ರದೇಶ, ಮಹಿಳಾ ಹಾಸ್ಟೆಲ್‌ಗಳು, ಪಾರ್ಕ್‌, ದೇವಸ್ಥಾನ, ಮನೆ, ಜನವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

9 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

10 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

10 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

10 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

10 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

11 hours ago