ರಾಜ್ಯ

ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ2 ರಷ್ಟು ಮೀಸಲಾತಿ: ಸಿಎಂ ಘೋಷಣೆ!

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಘೋಷಣೆ ಮಾಡಿದ್ದಾರೆ.

ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್‌ ಆರ್ಚರಿ ಚಾಂಪಿಯನ್‌ ಶಿಪ್‌ ಸಮಾರೋಪ ಸಮಾರಂಭದಲ್ಲಿ ವಿಜೇತ ಆರ್ಚರಿ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಆರ್ಚರಿ ಚಾಂಪಿಯನ್​ಶಿಪ್​ ಆಯೋಜಿಸಲಾಗಿದೆ. 24 ರಾಜ್ಯಗಳ ಪೊಲೀಸ್ ತಂಡ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಸರ್ಕಾರದಿಂದ ‌ವಿಜೇತರಿಗೆ 25 ಲಕ್ಷ ರೂ. ಬಹುಮಾನ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

(ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಶೇಕಡಾ ಮೂರರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಶೇಕಡಾ ಎರಡರಷ್ಟು ನೀಡಲು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2023ರ ಅಕ್ಟೋಬರ್‌ 18 ರಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಚೀನಾದಲ್ಲಿ ನಡೆದ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳು ತರಬೇತುದಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಮಾತನಾಡಿದ್ದರು.)

ಆರ್ಚರಿಯಲ್ಲಿ ಪುರುಷರ ಚಾಂಪಿಯನ್ ಶಿಪ್​​ನಲ್ಲಿ ITBP ತಂಡ 9 ಗೋಲ್ಡ್ ಮೆಡಲ್ ಪಡೆಯಿತು. ಆರ್ಚರಿಯಲ್ಲಿ ಮಹಿಳೆಯರ ಚಾಂಪಿಯನ್ ಶಿಪ್​​ನಲ್ಲಿ ರಾಜಸ್ಥಾನ ತಂಡ 7, ಆರ್ಚರಿಯಲ್ಲಿ ವೈಯಕ್ತಿಕ ಪುರುಷ ವಿಭಾಗದ ಚಾಂಪಿಯನ್- ರಜತ್ ಚೌಹಣ್ ರಾಜಸ್ಥಾನ ಡಿವೈಎಸ್ಪಿ (ಅರ್ಜುನ ಪ್ರಶಸ್ತಿ ವಿಜೇತ) 5 ಚಿನ್ನದ ಪದಕ, ಆರ್ಚರಿಯಲ್ಲಿ ವೈಯಕ್ತಿಕ ಮಹಿಳಾ ವಿಭಾಗದ ಚಾಂಪಿಯನ್ – ಅಮನ್ ದೀಪ್ ಕೌರ್- ರಾಜಸ್ಥಾನ 4 ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಸಮಾರಂಭದಲ್ಲಿ ಸಚಿವರಾದ ಡಾ.ಪರಮೇಶ್ವರ್, ​ರಾಮಲಿಂಗಾರೆಡ್ಡಿ, ನಾಗೇಂದ್ರ, ಡಿಜಿ&ಐಜಿಪಿ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಅಶ್ವದಳ, ಬಾಂಬ್ ನಿಷ್ಕ್ರೀಯ ದಳ, ಗರುಡ ಪಡೆಯಿಂದ ಅಣುಕು ಪ್ರದರ್ಶನ ನಡೆಯಿತು. ಬಾಂಬ್ ಇಟ್ಟಾಗ ಅದನ್ನ ಪತ್ತೆ ಮಾಡಿ ನಿಷ್ಕ್ರೀಯ ಮಾಡಿ ಅಜ್ಞಾತ ಸ್ಥಳದಲ್ಲಿ ಸ್ಪೋಟಿಸುವುದರ ಕುರಿತು, ಬಸ್ ಹೈಜಾಕ ಮಾಡಿದಾಗ ಐಎಸ್​​ಡಿ ಗರುಡ ಪಡೆಯ ಕ್ಷಿಪ್ರ ಕಾರ್ಯಚರಣೆ, ಬಸ್ ಹೈಜಾಕ್ ವೇಳೆ ಶ್ವಾನದಳವೂ ಹೇಗೆ ಕೆಲಸ ಮಾಡುತ್ತದೆ ಎಂಬುವುದರ ಬಗ್ಗೆ ಅಣುಕು ಪ್ರದರ್ಶನ ನಡೆಯಿತು.

andolanait

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

2 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

2 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

2 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

5 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

5 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago