ರಾಜ್ಯ

ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ2 ರಷ್ಟು ಮೀಸಲಾತಿ: ಸಿಎಂ ಘೋಷಣೆ!

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಘೋಷಣೆ ಮಾಡಿದ್ದಾರೆ.

ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್‌ ಆರ್ಚರಿ ಚಾಂಪಿಯನ್‌ ಶಿಪ್‌ ಸಮಾರೋಪ ಸಮಾರಂಭದಲ್ಲಿ ವಿಜೇತ ಆರ್ಚರಿ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಆರ್ಚರಿ ಚಾಂಪಿಯನ್​ಶಿಪ್​ ಆಯೋಜಿಸಲಾಗಿದೆ. 24 ರಾಜ್ಯಗಳ ಪೊಲೀಸ್ ತಂಡ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಸರ್ಕಾರದಿಂದ ‌ವಿಜೇತರಿಗೆ 25 ಲಕ್ಷ ರೂ. ಬಹುಮಾನ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

(ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಶೇಕಡಾ ಮೂರರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಶೇಕಡಾ ಎರಡರಷ್ಟು ನೀಡಲು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2023ರ ಅಕ್ಟೋಬರ್‌ 18 ರಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಚೀನಾದಲ್ಲಿ ನಡೆದ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳು ತರಬೇತುದಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಮಾತನಾಡಿದ್ದರು.)

ಆರ್ಚರಿಯಲ್ಲಿ ಪುರುಷರ ಚಾಂಪಿಯನ್ ಶಿಪ್​​ನಲ್ಲಿ ITBP ತಂಡ 9 ಗೋಲ್ಡ್ ಮೆಡಲ್ ಪಡೆಯಿತು. ಆರ್ಚರಿಯಲ್ಲಿ ಮಹಿಳೆಯರ ಚಾಂಪಿಯನ್ ಶಿಪ್​​ನಲ್ಲಿ ರಾಜಸ್ಥಾನ ತಂಡ 7, ಆರ್ಚರಿಯಲ್ಲಿ ವೈಯಕ್ತಿಕ ಪುರುಷ ವಿಭಾಗದ ಚಾಂಪಿಯನ್- ರಜತ್ ಚೌಹಣ್ ರಾಜಸ್ಥಾನ ಡಿವೈಎಸ್ಪಿ (ಅರ್ಜುನ ಪ್ರಶಸ್ತಿ ವಿಜೇತ) 5 ಚಿನ್ನದ ಪದಕ, ಆರ್ಚರಿಯಲ್ಲಿ ವೈಯಕ್ತಿಕ ಮಹಿಳಾ ವಿಭಾಗದ ಚಾಂಪಿಯನ್ – ಅಮನ್ ದೀಪ್ ಕೌರ್- ರಾಜಸ್ಥಾನ 4 ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಸಮಾರಂಭದಲ್ಲಿ ಸಚಿವರಾದ ಡಾ.ಪರಮೇಶ್ವರ್, ​ರಾಮಲಿಂಗಾರೆಡ್ಡಿ, ನಾಗೇಂದ್ರ, ಡಿಜಿ&ಐಜಿಪಿ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಅಶ್ವದಳ, ಬಾಂಬ್ ನಿಷ್ಕ್ರೀಯ ದಳ, ಗರುಡ ಪಡೆಯಿಂದ ಅಣುಕು ಪ್ರದರ್ಶನ ನಡೆಯಿತು. ಬಾಂಬ್ ಇಟ್ಟಾಗ ಅದನ್ನ ಪತ್ತೆ ಮಾಡಿ ನಿಷ್ಕ್ರೀಯ ಮಾಡಿ ಅಜ್ಞಾತ ಸ್ಥಳದಲ್ಲಿ ಸ್ಪೋಟಿಸುವುದರ ಕುರಿತು, ಬಸ್ ಹೈಜಾಕ ಮಾಡಿದಾಗ ಐಎಸ್​​ಡಿ ಗರುಡ ಪಡೆಯ ಕ್ಷಿಪ್ರ ಕಾರ್ಯಚರಣೆ, ಬಸ್ ಹೈಜಾಕ್ ವೇಳೆ ಶ್ವಾನದಳವೂ ಹೇಗೆ ಕೆಲಸ ಮಾಡುತ್ತದೆ ಎಂಬುವುದರ ಬಗ್ಗೆ ಅಣುಕು ಪ್ರದರ್ಶನ ನಡೆಯಿತು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

11 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago