ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಎಂಬ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸಾತ್ವಿಕ್ನನ್ನು ರಕ್ಷಣೆ ಮಾಡುವಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ನಿನ್ನೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಜಮೀನಿಗೆ ಬಿದ್ದಿದ್ದ ಸಾತ್ವಿಕ್ಗಾಗಿ ತಾಯಿ ಸಾಕಷ್ಟು ಹುಡುಕಾಟ ನಡೆಸಿದ್ದರು. 500 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದು, 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಮಗನಿಗಾಗಿ ಹುಡುಕಾಟ ನಡೆಸಿ ಕೊಳವೆ ಬಾವಿಗೆ ಲೈಟ್ ಬಿಟ್ಟು ನೋಡಿದಾಗ ಸಾತ್ವಿಕ್ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿರುವುದು ತಿಳಿದುಬಂದಿದೆ.
ವಿಷಯ ತಿಳಿದ ಕೂಡಲೇ ಕಾರ್ಯಾಚರಣೆ ಆರಂಭವಾಗಿದೆ. ಎರಡು ಇಟಾಚಿ ಹಾಗೂ ಮೂರು ಜೆಸಿಬಿಗಳನ್ನು ಬಳಸಿ ಕೊಳವೆ ಬಾವಿ ಪಕ್ಕ ನೆಲವನ್ನು ಹಗೆದು ಮಗುವಿನ ರಕ್ಷಣಾಕಾರ್ಯವನ್ನು ಯಶಸ್ವಿಯಾಗಿ ಮಾಡಲಾಗಿದೆ. ಸತತವಾಗಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವಿನ ರಕ್ಷಣೆ ಮಾಡುವಲ್ಲಿ ತಂಡಗಳು ಯಶಸ್ವಿಯಾಗಿವೆ. ಮಗುವನ್ನು ರಕ್ಷಿಸಿದ ಕೂಡಲೇ ಆಂಬುಲೆನ್ಸ್ ಮೂಲಕ ಇಂಡಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…