big shocking for ksrtc transport unions
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಮಾ.19 ರಂದು ಯುಗಾದಿ ಹಾಗೂ ಮಾ.21ರಂದು ರಂಜಾನ್ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿಯು ಮಾ. 18ರಿಂದ ಮಾ.20ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಿದೆ.
ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮಾ.22 ರಂದು ವಿಶೇಷ ಬಸ್ಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯ ಒದಗಿಸಲಾಗುತ್ತದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಬಸ್ ಸೌಲಭ್ಯವಿರಲಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…