ರಾಜ್ಯ

ಬಳ್ಳಾರಿಯಲ್ಲಿ ಹಕ್ಕಿ ಜ್ವರ ಆರ್ಭಟ: 2000 ಕೋಳಿಗಳು ಬಲಿ

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೇಕುಪ್ಪ ಫಾರ್ಮ್‌ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿವೆ.

ಕುರೇಕುಪ್ಪ ಜಾನುವಾರು ಸಂವರ್ಧನೆ ಮತತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಒಂದು ವಾರದ ಅಂತರದಲ್ಲಿ ಹಕ್ಕಿಜ್ವರದಿಂದ 2000 ಕೋಳಿಗಳು ಸಾವನ್ನಪ್ಪಿರುವುದು ದೃಢಪಟ್ಟಿದೆ.

ಕಳೆದ ಹತ್ತು ದಿನಗಳಿಂದ ಪ್ರತಿದಿನ ಮೂವತ್ತು ಕೋಳಿಗಳು ಸಾಯುತ್ತಿವೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಆರೋಗ್ಯ ಇಲಾಖೆಯು ಸಾವನ್ನಪ್ಪಿರುವ ಕೋಳಿಗಳ ಸ್ಯಾಂಪಲ್‌ನ್ನು ಭೋಪಾಲ್‌ನಲ್ಲಿನ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಇದೀಗ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿದೆ.

ಕೇಂದ್ರದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಹಳ್ಳಿಗಳು, ಜನವಸತಿ ಪ್ರದೇಶಗಳು ಇಲ್ಲ. 10 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಫಾರ್ಮ್‌ಗಳು ಸಹ ಇಲ್ಲ. ಇದರಿಂದ ಹಕ್ಕಿಜ್ವರ ಬೇರೆಡೆಗೆ ಹರಡುವ ಸಾಧ್ಯತೆ ಕಡಿಮೆಯಿದೆ ಎಂದು ಹೇಳಲಾಗುತ್ತಿದ್ದು, ಆದರೂ ಜನತೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

9 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

11 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

12 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

15 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago